LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

 

ಚಿತ್ರದುರ್ಗ: ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಭರಮಸಾಗರ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ 7 ಕಾರ್ಯಕರ್ತೆ, 23 ಸಹಾಯಕಿ ಸೇರಿ 30 ಹುದ್ದೆಗಳು, ಚಿತ್ರದುರ್ಗದಲ್ಲಿ 2 ಕಾರ್ಯಕರ್ತೆ, 9 ಸಹಾಯಕಿ ಸೇರಿ 11 ಹುದ್ದೆಗಳು, ಚಳ್ಳಕೆರೆಯಲ್ಲಿ 2 ಕಾರ್ಯಕರ್ತೆ, 24 ಸಹಾಯಕಿ ಸೇರಿ 26 ಹುದ್ದೆಗಳು, ಹಿರಿಯೂರಿನಲ್ಲಿ 2 ಕಾರ್ಯಕರ್ತೆ, 53 ಸಹಾಯಕಿ ಸೇರಿ 55 ಹುದ್ದೆಗಳು, ಹೊಳಲ್ಕೆರೆಯಲ್ಲಿ 4 ಕಾರ್ಯಕರ್ತೆ, 45 ಸಹಾಯಕಿ ಸೇರಿ 49 ಹುದ್ದೆಗಳು, ಹೊಸದುರ್ಗದಲ್ಲಿ 11 ಕಾರ್ಯಕರ್ತೆ, 53 ಸಹಾಯಕಿ ಸೇರಿ 64 ಹುದ್ದೆಗಳು, ಮೊಳಕಾಲ್ಮೂರು ನಲ್ಲಿ 1 ಕಾರ್ಯಕರ್ತೆ, 21 ಸಹಾಯಕಿ ಸೇರಿ 22 ಹುದ್ದೆಗಳ ನೇಮಕಕ್ಕೆ ಪ್ರಕಟಣೆ ಹೊರಡಿಸಲಾಗಿದೆ.

ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‌ಸೈಟ್  https://karnemakaone.kar.inc.in/abcd/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026