Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 22: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು.

ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯ ಇಲ್ಲ ಎಂಬಂತಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇವತ್ತು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸರಕಾರಿ ಶಾಲೆಯ ಒಬ್ಬ ಶಿಕ್ಷಕ ರಾಜ್ಯದಲ್ಲಿ ಯಾವ್ಯಾವ ಮುಖ್ಯಮಂತ್ರಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬ ವಿವರವನ್ನು ತನ್ನ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಮಾಡಿದ್ದ ಸಾಲ, ಜೆ.ಎಚ್.ಪಟೇಲ್, ಸಿದ್ದರಾಮಯ್ಯ, ಯಡಿಯೂರಪ್ಪ ಮತ್ತಿತರ ಸಿಎಂಗಳ ಅವಧಿಯ ಸಾಲದ ವಿವರ ನೀಡಿದ್ದಾರೆ.

ಇದನ್ನು ಬಿಇಒ ಜಯಪ್ಪರ ಗಮನಕ್ಕೆ ತಂದ ಸರಕಾರವು ಶಿಕ್ಷಕ ಶಾಂತಮೂರ್ತಿಯವರನ್ನು ಅಮಾನತು ಮಾಡಿಸಿದೆ ಎಂದು ಟೀಕಿಸಿದರು.

ಈ ಹಿಂದೆ ಮನೆಯಲ್ಲಿ ವಿದ್ಯುತ್ ಇಲ್ಲ ಎಂದು ಕೇಳಿದ್ದ ಸುಳ್ಯದ ಗ್ರಾಹಕರೊಬ್ಬರ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿ ಅವರನ್ನು ಒಳಗಡೆ ಹಾಕಿಸಿದ್ದರು. ಅಂದಿನ ವಿದ್ಯುತ್ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ಇದು ಆಗಿತ್ತು ಎಂದು ಆಕ್ಷೇಪಿಸಿದರು.

ಹಿಂದೆ ಶ್ರೀಮತಿ ಇಂದಿರಾ ಗಾಂಧಿಯವರ ಆಡಳಿತದಲ್ಲೂ ಪತ್ರಿಕೆಯವರು ಸೇರಿ ಎಲ್ಲರ ಮೇಲೆ ದೌರ್ಜನ್ಯಗಳು, ದಬ್ಬಾಳಿಕೆಗಳು ನಡೆದಿದ್ದವು. ಇದು ಸರಿ ಇಲ್ಲ. ಈ ಪ್ರವೃತ್ತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು.

ಪ್ರಮಾಣವಚನ ಸ್ವೀಕಾರದ ಬಳಿಕ ಗ್ಯಾರಂಟಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ಅನುಷ್ಠಾನಕ್ಕೆ ತರುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ದೀರಿ. ಕೇಂದ್ರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಒಂದು ಕೆಜಿ ಅಕ್ಕಿ ಸೇರಿಸಿ 6 ಕೆಜಿ ಕೊಡುತ್ತಿದ್ದರು. 6 ಕೆಜಿ ಜೊತೆ ನಿಮ್ಮ 10 ಕೆಜಿ ಸೇರಿಸಿ 16 ಕೆಜಿ ಕೊಡುತ್ತೀರಾ ಅಥವಾ ಮೋದಿಯವರ 5 ಕೆಜಿಗೆ 5 ಕೆಜಿ ಸೇರಿಸಿ 10 ಕೆಜಿ ಕೊಡುತ್ತೀರಾ ಎಂದು ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

ಕೇಂದ್ರದ 5 ಕೆಜಿಗೆ 5 ಕೆಜಿ ಸೇರಿಸಿದರೆ ನಿಮ್ಮದು 5 ಕೆಜಿ ಆಗಲಿದೆ. 10 ಕೆಜಿ ಆಗುವುದಿಲ್ಲ. ಮಾತು ಕೊಟ್ಟಂತೆ ನಡೆಯುವುದಾದರೆ 15 ಕೆಜಿ ಕೊಡಬೇಕು. ಈ ಕುರಿತು ಬಿಜೆಪಿ ನಿಮ್ಮಿಂದ ತಕ್ಷಣ ಸ್ಪಷ್ಟನೆ ಬಯಸುತ್ತದೆ ಎಂದು ತಿಳಿಸಿದರು. ಜನರನ್ನು ದಾರಿತಪ್ಪಿಸುವ ಕೆಲಸ ಮಾಡಬೇಡಿ ಎಂದು ಅವರು ತಿಳಿಸಿದರು.

ಈ ಬಾರಿ ಮಾವು ಫಸಲು ಕಡಿಮೆ ಇತ್ತು. ಆಲಿಕಲ್ಲು ಮಳೆ ಮತ್ತು ಅಕಾಲಿಕ ಮಳೆಯಿಂದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮಾವು ಬೆಳೆಗಾರರಿಗೆ ಅಪಾರ ನಷ್ಟವಾಗಿದೆ. ಕಂಪೆನಿಗಳು ಪ್ರತಿ ಟನ್‍ಗೆ 45 ಸಾವಿರದಿಂದ 55 ಸಾವಿರ ಬೆಲೆ ನೀಡಿ ಖರೀದಿ ಮಾಡುತ್ತಿದ್ದವು ಎಂದ ಅವರು, ಸರಕಾರ ಎಚ್ಚತ್ತುಕೊಂಡು ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ