LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್

ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಶುರುವಾಗಲಿದ್ದು, 40 ಸಾವಿರ ಉದ್ಯೋಗ ಸೃಷ್ಟಿಯಾಗುವ ಗುರಿ ಇದೆ. ಮುಂದಿನ ಸಲ ಬಂದಾಗ ನಾನು ಈ ಕಂಪನಿಗೆ ಭೇಟಿ ಕೊಡುತ್ತೇನೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್   ಮಾಹಿತಿ ನೀಡಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಿದೆ. ಉದ್ಯೋಗ ಸೃಷ್ಟಿಯಾಗುವುದೇ ಉತ್ಪಾದನಾ ವಲಯದಿಂದ. ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಫೂಟ್‌‌ವೇರ್ ಉತ್ಪಾದಕ ವಲಯಗಳಿಗೆ ಬಜೆಟ್ ಪುಷ್ಟಿ ನೀಡಿದೆ ಎಂದಿದ್ದಾರೆ.

ಕರ್ನಾಟಕ ರೈಲ್ವೇಗೆ 7,564 ಕೋಟಿ ರೂ. ಅನುದಾನ ಕೊಡಲಾಗಿದೆ. ಯುಪಿಎ ಅವಧಿಯಲ್ಲಿ 850 ಕೋಟಿ ರೂ.‌ ಕೊಡಲಾಗುತ್ತಿತ್ತು. 51,479 ಕೋಟಿಯಷ್ಟು ರೈಲ್ವೇ ವಲಯದಲ್ಲಿ ಬಂಡವಾಳ ಹೂಡಲಾಗಿದೆ. ಅಮೃತ್ ಸ್ಟೇಷನ್ ಯೋಜನೆಯಡಿ 61 ರೈಲ್ವೇ ನಿಲ್ದಾಣಗಳ ಮರು ನಿರ್ಮಾಣ ಆಗಿದೆ. 1,652 ಕಿ.ಮೀ. ಹೊಸ ರೈಲ್ವೇ ಮಾರ್ಗದ ನಿರ್ಮಾಣ ರಾಜ್ಯದಲ್ಲಾಗಿದೆ. 10 ವಂದೇ ಭಾರತ್ ರೈಲುಗಳು ಕರ್ನಾಟಕದಲ್ಲಿ ಸಂಚರಿಸುತ್ತಿವೆ, ಮತ್ತಷ್ಟು ಬರಲಿವೆ. ಸಬ್ ಅರ್ಬನ್ ರೈಲ್ವೇ ಯೋಜನೆಗೆ 15,762 ಕೋಟಿ ರೂ. ಕೊಡಲಾಗಿದೆ. 15,611 ಕೋಟಿ ರೂ. ಮೆಟ್ರೋಗೆ ಕೊಡಲಾಗಿದೆ ಎಂದು ಹೇಳಿದ್ದಾರೆ.

ಕಳೆದ 60 ವರ್ಷದಲ್ಲಿ ಆಗದಿರುವ ಕೆಲಸ ಪ್ರಧಾನಿ ಮೋದಿ ಅವಧಿಯಲ್ಲಾಗಿದೆ. ಒಂದು ಮತ್ತು ಎರಡನೇ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ‌ ದೇಶದ ಯಾವ ಭಾಗಕ್ಕೆ ಹೋದರೂ ಕಾಣುತ್ತದೆ. 12 ಲಕ್ಷದವರೆಗೆ ತೆರಿಗೆ ಇಲ್ಲದಿರುವುದು ಐಐಎಂ, ಐಐಟಿ ಇದೆಲ್ಲಾ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ವಾಜಪೇಯಿ ಅವಧಿ ಬಳಿಕ ಯುಪಿಎ ಅವಧಿಯಲ್ಲಿ ಭಾರತದ ಆರ್ಥಿಕತೆ ಬಹಳ ಕೆಟ್ಟ ಸ್ವರೂಪದಲ್ಲಿ ಇತ್ತು. 2014 ರಲ್ಲಿ ಬ್ಯಾಂಕಿಂಗ್ ವಲಯ ಅಷ್ಟು ಉತ್ತಮವಾಗಿರಲಿಲ್ಲ. ಪ್ರಧಾನಿ ಮೋದಿ ಅದಕ್ಕೊಂದು ಆಯಾಮ ನೀಡಿದರು. ಪ್ರತಿ ವರ್ಷ ಹೈವೇ, ರೈಲ್ವೇ, ಏರ್ ಪೋರ್ಟ್ ಅಭಿವೃದ್ಧಿ ಆಯಿತು ಎಂದು ತಿಳಿದ್ದಾರೆ.

ಕೇಂದ್ರ ಸರ್ಕಾರದ ಆಡಳಿತಕ್ಕೆ ಜನ ಮೆಚ್ಚುಗೆ ದೊಡ್ಡದಾಗಿಯೇ ಸಿಗುತ್ತಿದೆ. ಮೋದಿ ದೂರದೃಷ್ಟಿ ಯೋಜನೆಗಳಿಗೆ ಜನರ ಬೆಂಬಲ ಸಿಕ್ಕಿದೆ. ಜನಧನ್, ಉಜ್ವಲಾ, ಜಲಜೀವನ್ ಯೋಜನೆಗಳು ಜನರ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿವೆ. ಮೂಲಸೌಕರ್ಯ ವೃದ್ಧಿ, ಶಿಕ್ಷಣ ಅಭಿವೃದ್ಧಿ, ರೈಲ್ವೇ ಯೋಜನೆಗಳು ಜನರ ಬದುಕಿನ ಗತಿ ಬದಲಿಸಿವೆ ಎಂದರು.

ಈ ಬಾರಿಯ ಬಜೆಟ್​ನ ಬಹು‌ ಮುಖ್ಯ ಅಂಶ ತೆರಿಗೆ ಸುಧಾರಣೆ. ಪ್ರಧಾನಿ ಮೋದಿ ಆರ್ಥಿಕ ಚಿಂತನೆಗಳು ಸಾಕಷ್ಟು ಬದಲಾವಣೆ ತಂದಿದೆ. ಹತ್ತು ವರ್ಷಗಳ ಹಿಂದೆ ಕಾಲ್ ಡ್ರಾಪ್ ಆಗುವುದು ದೊಡ್ಡ ಚರ್ಚೆ ಆಗುತ್ತಿತ್ತು. ಈಗ ನಮಗೆ ಉತ್ತಮ 5ಜಿ ನೆಟ್ ವರ್ಕ್ ಇದೆ. ಕಳೆದ ಹತ್ತು ವರ್ಷದಿಂದ ವಿವಿಗಳು, ಐಐಎಂ, ಐಐಟಿ, ಮೆಡಿಕಲ್ ಕಾಲೇಜುಗಳ ಸಂಖ್ಯೆ ದುಪ್ಪಟ್ಟಾಗಿವೆ. ಬಡ-ಮಧ್ಯಮ ವರ್ಗದ ಮೇಲೆ ಈ ಬಾರಿ ಬಜೆಟ್ ಫೋಕಸ್ ಮಾಡಿದೆ. ಕಿಸಾನ್ ಸಮ್ಮಾನ್ ನಿಧಿಯಂತಹ ರೈತ ಕಲ್ಯಾಣ ಯೋಜನೆಗಳು ಬದಲಾವಣೆಗೆ ಸಾಕ್ಷಿ ಆಗಿವೆ. ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ನಿರೀಕ್ಷೆ, ಭರವಸೆ ನಮ್ಮ ಸರ್ಕಾರದಿಂದ ಸಿಕ್ಕಿದೆ. ಈಗ ದೇಶ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಸೃಷ್ಟಿಸಿದೆ. ಹಣದುಬ್ಬರಕ್ಕೆ ಕಡಿವಾಣ ಬಿದ್ದಿದೆ ಎಂದು ಹೇಳಿದ್ದಾರೆ.

ಮುಂದಿನ ವರ್ಷದ ಹೊತ್ತಿಗೆ ನಮ್ಮ ದೇಶ 356 ಲಕ್ಷ ಕೋಟಿ ಆರ್ಥಿಕತೆ ಹೊಂದಲಿದೆ. ಜಗತ್ತಿನ ಐದನೇ ದೊಡ್ಡ ಆರ್ಥಿಕತೆಯ ದೇಶ ಭಾರತ. ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್​ಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕತೆಯ ಆರೋಗ್ಯ ಚೆನ್ನಾಗಿದೆ. ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಿದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!