LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಕ್ಕಲೆಬ್ಬಿಸಿದ ಮುಸ್ಲಿಮರಿಗೆ ಆಶ್ರಯ ಕೊಡಬೇಡಿ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಸಂವಿಧಾನ ವಿರೋಧಿ ಹೇಳಿಕೆ

ಗುವಾಹಟಿ: ಅರಣ್ಯ ಪ್ರದೇಶಗಳು ಹಾಗೂ ಸರಕಾರಿ ಭೂಮಿಯಲ್ಲಿ ನೆಲೆಸಿರುವ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ಒಕ್ಕಲೆಬ್ಬಿಸುವ ಕಾರ್ಯಾಚರಣೆಗೆ ಚಾಲನೆ ನೀಡಿರುವ ಬೆನ್ನಿಗೇ, ಸ್ಥಳೀಯರು ಒಕ್ಕಲೆಬ್ಬಿಸಿದ ಮುಸ್ಲಿಮರಿಗೆ ಆಶ್ರಯ ಒದಗಿಸಬಾರದು ಎಂದು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಂತ ಬಿಸ್ವ ಶರ್ಮ, “ನಮ್ಮ ಜನರಿಗೆ ಈಗ ಹಿಂದೆಂದಿಗಿಂತ ಹೆಚ್ಚು ಜಾಗೃತಿಯುಂಟಾಗಿದೆ. ನಮ್ಮ ಜನ ಅವರೊಂದಿಗೆ ಹೆಚ್ಚು ಸಹಕರಿಸುತ್ತಾರೆ ಎಂದು ನನಗನ್ನಿಸುವುದಿಲ್ಲ. ಅವರು ಎಲ್ಲಿಂದ ಬಂದರೋ ಅಲ್ಲಿಗೇ ಮರಳಬೇಕು ಎಂಬುದು ನನ್ನ ಬಯಕೆಯಾಗಿದೆ. ಅದಕ್ಕೆ ನನ್ನ ಯಾವ ತಕರಾರೂ ಇಲ್ಲ. ಆದರೆ, ನಮ್ಮ ಜನ ಅವರಿಗೆ ಆಶ್ರಯ ನೀಡಬಾರದು. ಇಲ್ಲದಿದ್ದರೆ ಪರಿಸ್ಥಿತಿ ಮತ್ತೊಮ್ಮೆ ಹದಗೆಡಲಿದೆ” ಎಂದು ಎಚ್ಚರಿಸಿದ್ದಾರೆ.

ಒಕ್ಕಲೆಬ್ಬಿಸುವುದು ಹಾಗೂ ಇನ್ನಿತರ ಕ್ರಿಯೆಗಳ ಮೂಲಕ ನಾವು ನಮ್ಮ ಪರಿಸ್ಥಿತಿಯನ್ನು ಸುಧಾರಿಸಿದ್ದೇವೆ” ಎಂದು ಒಕ್ಕಲೆಬ್ಬಿಸಿದ ಸ್ಥಳಗಳ ಬಳಿ ತೆರವುಗೊಂಡ ಜನರು ಆಶ್ರಯ ಪಡೆಯುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ನಮ್ಮ ಜನ ಎಂದು ಅವರು ಯಾರ ಕುರಿತು ಉಲ್ಲೇಖಿಸಿದ್ದಾರೆ ಎಂಬುದನ್ನು ಅವರು ನಿರ್ದಿಷ್ಟವಾಗಿ ಹೇಳದಿದ್ದರೂ, ನೆರೆಯ ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂದು ಬಿಜೆಪಿ ಪರಿಗಣಿಸಿರುವ ಬಂಗಾಳಿ ಭಾಷಿಕ ಮುಸ್ಲಿಮರನ್ನು ಹೊರತುಪಡಿಸಿ ಉಳಿದೆಲ್ಲ ಸ್ಥಳೀಯರನ್ನು ಅವರು ನಮ್ಮ ಜನರು ಎಂದು ಉಲ್ಲೇಖಿಸಿದ್ದಾರೆ ಎಂದು ಸರಕಾರದ ಆಂತರಿಕ ಮೂಲಗಳು ಹೇಳಿವೆ.

ಇನ್ನೂ ದೊಡ್ಡ ಪ್ರಮಾಣದ ಭೂಮಿ ಅಕ್ರಮ ವಶದಲ್ಲಿದೆ. 29 ಲಕ್ಷ ಬಿಘಾ ಭೂಮಿಗಿಂತ ಹೆಚ್ಚು ಭೂಮಿ ಈಗಲೂ ಅಕ್ರಮ ವಶದಲ್ಲಿದೆ. ಹೀಗಾಗಿ ಇದು ಸಾಕಷ್ಟು ಸಮಯ ತೆಗೆದುಕೊಳ್ಳಲಿದ್ದು, ಇನ್ನೂ ಸಾಕಷ್ಟು ಕೆಲಸ ಮಾಡುವುದು ಬಾಕಿ ಇದೆ. ಒಂದು ವೇಳೆ ಜನರು ಸಹಕರಿಸಿದರೆ, ನಾವು ನಮ್ಮ ಸಮುದಾಯಗಳನ್ನು ರಕ್ಷಿಸುವ ಕೆಲಸವನ್ನು ಮಾಡುವುದು ಸಾಧ್ಯಲವಾಗಲಿದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಜನರು ಭೂಮಿಯ ಪಟ್ಟಾಗಾಗಿ ಅಳುತ್ತಿದ್ದಾರೆ. ಆದರೆ, ಅವರು ಸರಕಾರದ 300ರಿಂದ 400 ಬಿಘಾ ಭೂಮಿಯನ್ನು ಆಕ್ರಮಿಸಿಕೊಂಡಿದ್ದಾರೆ” ಎಂದೂ ಅವರು ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026