LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿ ಕೊಲೆ ಆರೋಪಿ ರಕ್ಷಣೆಗೆ ಕಾಣದ ಕೈಗಳ ಪ್ರಯತ್ನ: hdk

ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ.

ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು; ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದ.

ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ