LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರೇ ಗಮನಿಸಿ : ಮೇ.17 ರ ಮಧ್ಯರಾತ್ರಿಯಿಂದ ಬೇಸಿಗೆ ಹಂಗಾಮಿನ ನೀರು ಬಂದ್

ಶಿವಮೊಗ್ಗ; ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುವೆಗಳಲ್ಲಿ ಮೇ.17ರವರೆಗೆ ಹೆಚ್ಚುವರಿಯಾಗಿ ನೀರು ಹರಿಸುತ್ತಿದ್ದು, ಮೇ 17 ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಭದ್ರಾ ಜಲಾಶಯದಲ್ಲಿ ಕುಡಿಯುವ ನೀರು ಶೇಖರಣೆ ಮಾತ್ರ ಉಳಿದಿದ್ದು, ಹೆಚ್ಚುವರಿಯಾಗಿ ಬೆಳೆಗಳಿಗೆ ನೀರನ್ನು ಹರಿಸಲು ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

ತಾಳೆಗರಿ ಹಸ್ತಪ್ರತಿಗಳ ಸಂರಕ್ಷಣೆಗೆ ಶಿವಮೊಗ್ಗದಲ್ಲಿ ಗಣತಿ ಮತ್ತು ಸಮೀಕ್ಷೆ ಕಾರ್ಯ ಆರಂಭ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ :   ಕೇಂದ್ರ ಸರ್ಕಾರದ ‘ಜ್ಞಾನ ಭಾರತಂ ಮಿಷನ್’ ಯೋಜನೆಯಡಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನದ ಮೂಲಕ ಸಂರಕ್ಷಣೆ ಹಾಗೂ‌ ಡಿಜಿಟಲೀಕರಣ ಮಾಡುವ ಯೋಜನೆ ಹಮ್ಮಿಕೊಂಡಿದ್ದು ಈ ಯೋಜನೆಯ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಳೆಗರಿ ಹಸ್ತಪ್ರತಿಗಳ ಗಣತಿ ಮತ್ತು ಸಮೀಕ್ಷೆ ಕಾರ್ಯವು ಪ್ರಸ್ತುತ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.

ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಹಸ್ತಪ್ರತಿಗಳನ್ನು ಸಮೀಕ್ಷೆ ಮಾಡಿ, ಡಿಜಿಟಲೀಕರಣದ ಮೂಲಕ ಭವಿಷ್ಯದ ಪೀಳಿಗೆಗಾಗಿ ಶಾಶ್ವತವಾಗಿ ಉಳಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.

ರಾಷ್ಟ್ರೀಯ ಭಂಡಾರ: ಸಂಗ್ರಹಿಸಲಾದ ಹಸ್ತಪ್ರತಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ರಾಷ್ಟ್ರೀಯ ಭಂಡಾರಕ್ಕೆ (ನ್ಯಾಷನಲ್ ರೆಸ್ಪಾನ್ಸಿಬಿಲಿಟಿ) ಅಪ್‌ಲೋಡ್ ಮಾಡಲಾಗುತ್ತದೆ. ಇದರಿಂದ ಜಗತ್ತಿನಾದ್ಯಂತ ಈ ಜ್ಞಾನವನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ.

ಆದ್ದರಿಂದ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಮಠ-ಮಂದಿರಗಳು ಮತ್ತು ದೇವಾಲಯಗಳಲ್ಲಿ ಹಸ್ತಪ್ರತಿಗಳು ಲಭ್ಯವಿದ್ದಲ್ಲಿ ಅವುಗಳ ಮಾಹಿತಿಯನ್ನು ನೀಡಿ ಸಹಕರಿಸಲು ಕೋರಲಾಗಿದೆ.ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡಲು ಇಚ್ಛಿಸುವವರು ವಿದ್ಯಾನ್ ಮಂಜುನಾಥ್, ಸಮನ್ವಯಾಧಿಕಾರಿ ಮೊ.ಸಂ. 9743250050 ಕುಮಾರ್ ಹೆಚ್.ಸಿ., ಸಹಾಯಕ ನಿರ್ದೇಶಕರು, ರಾಜ್ಯ ಪುರಾತತ್ವ ಇಲಾಖೆ 8105013149 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಅಂತ ಬುಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಹೊಸ ಆ್ಯಪ್!ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆBIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು: ಸರ್ಕಾರದಿಂದ ಮಹತ್ವದ ಆದೇಶALERT : ಸಾರ್ವಜನಿಕರೇ ಎಚ್ಚರ : ಶೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 16 ಕೋಟಿ ರೂ. ವಂಚನೆ!ಮೇ 18 ರಿಂದ SSLC ಪರೀಕ್ಷೆ-2 ಆರಂಭ ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆBIG NEWS : ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 24 ಮಕ್ಕಳ ರಕ್ಷಣೆ : ಮದರಸಾದ ನರಕಯಾತನೆ ಬಿಚ್ಚಿಟ್ಟ ಬಿಹಾರದ ಬಾಲಕರು.!