Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಳಸಂತೆಗೆ ಪೂರೈಸಲು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಚೀಲಗಳು ವಶಕ್ಕೆ

ಸದಲಗಾದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳ ಭರ್ಜರಿ ದಾಳಿ


ಚಿಕ್ಕೋಡಿ: ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಪೂರೈಸಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣವನ್ನು ಚಿಕ್ಕೋಡಿ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ, ಸುಮಾರು ನಾಲ್ಕು ಟನ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.


ಸದಲಗಾ ಪಟ್ಟಣದ ಪ್ರಕಾಶ ನಗರ ಪ್ರದೇಶದಲ್ಲಿ ದಾಳಿ ನಡೆಸಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗಾಧಿಕಾರಿ (ಎಸಿ) ಸುಭಾಷ ಸಂಪಗಾವಿ ಹಾಗೂ ತಹಶಿಲ್ದಾರ ರಾಜೇಶ್ ಬುರ್ಲಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಚಿಕ್ಕೋಡಿ ತಾಲೂಕು ಆಹಾರ ನಿರೀಕ್ಷಕಿ ಶ್ರೀಮತಿ ಐಶ್ವರ್ಯ ದಿವಟೆ, ಆಹಾರ ಶಿರಸ್ತೇದಾರ ಹನುಮಂತ ಖಾಂಡೇಕರ್ ಹಾಗೂ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.


ದಾಳಿಯ ವೇಳೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡವರಿಗೆ ಪೂರೈಕೆಯಾಗಬೇಕಾದ ಪಡಿತರ ಅಕ್ಕಿಯನ್ನು ಚೀಲಗಳಲ್ಲಿ ಸಂಗ್ರಹಿಸಿ ಕಾಳಸಂತೆಗೆ ಸಾಗಿಸಲು ಸಿದ್ಧಪಡಿಸಲಾಗಿತ್ತು. ಅಕ್ರಮ ಕೃತ್ಯದ ಆರೋಪವನ್ನು ಸುನೀಲ ಬಾಗಡಿ ಎಂಬಾತನ ಮೇಲೆ ಹೊರಿಸಲಾಗಿದೆ. ಅಧಿಕಾರಿಗಳು ಸ್ಥಳದಿಂದ ಸುಮಾರು 4 ಟನ್ಗೂ ಅಧಿಕ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.


ಬಡವರ ಅನ್ನದ ತಟ್ಟೆಗೆ ಸೇರಬೇಕಾದ ಅಕ್ಕಿಯನ್ನು ಲಾಭಕ್ಕಾಗಿ ಕಾಳಸಂತೆಗೆ ಸಾಗಿಸುವ ಉದ್ದೇಶದಿಂದ ಸಂಗ್ರಹಿಸಲಾಗಿದ್ದುದನ್ನು ಪತ್ತೆಹಚ್ಚಿದ ಆಹಾರ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ದಾಳಿ ಕಾಳಸಂತೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಕ್ಕಿ ಸಂಗ್ರಹ ಮತ್ತು ಸಾಗಣೆ ಜಾಲದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿರುವ ಸಾಧ್ಯತೆ ಕುರಿತು ತನಿಖೆ ಮುಂದುವರಿದಿದೆ. ಅಕ್ರಮ ಪಡಿತರ ವಹಿವಾಟು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



ಕಾರ್ಯಕ್ರಮದ ಕೊನೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಲಿನಿ ವೇಮುಲ್ಕರ್ ಅವರು ವಂದನಾ ಸಮರ್ಪಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದರು. ಒಟ್ಟಾರೆ, ಕಾರ್ಯಕ್ರಮ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಅರಿವು ಮೂಡಿಸುವಲ್ಲಿ ಪರಿಣಾಮಕಾರಿಯಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ