ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು ,ಪೋಲೀಸರು ಗಾಯಗೊಂಡು ಆಸ್ಪತ್ರೆ ಪಾಲಾಗಿತುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ವಾಲ್ಮೀಕಿ ಪುತ್ತಳಿ ಅನಾವರಣ ವಿಚಾರದಲ್ಲಿ ಬಿಜೆಪಿ - ಕಾಂಗ್ರೆಸ್ ಶಾಸಕರ ನಡುವೆ ವೈಮನಸ್ಸು ಉಂಟಾಗಿ ಬ್ಯಾನರ್ ಬಡಿದಾಟ ನಡೆದಿದ್ಸು, ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಅವರ ಗನ್ ಮ್ಯಾನ್ ಅವರು ಗಾಳಿಯಲ್ಲಿ ಗುಂಡಿ ಹಾರಿಸಿದ್ದಾರೆ. ಅದೂ ಸಹಾ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ.
ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳು ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ರಾಜಶೇಕರ್ ಸಾವನ್ನಪಿದ್ದು, ಆತನ ಮೃತ ದೇಹವನ್ನು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಪಡೆಯುತ್ತಿದ್ದಾರೆ.
ಘಟನೆಯಲ್ಲಿ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಪೋಲೀಸ್ ಪೇದೆಗಳ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಜನಾರ್ದನ ರೆಡ್ಡಿ ಅವರ ಮನೆಯ ಸುತ್ತಮುತ್ತ 144 ಸೆಕ್ಷೆನ್ ಜಾರಿ ಮಾಡಲಾಗಿದೆ. ಖಾಕಿ ಭದ್ರತೆ ಹೆಚ್ಚಿಸಲಾಗಿದೆ. ಇಬ್ಬರು ಶಾಸಕರು ಆರೋಪ ಪತ್ಯಾರೋಪ ಮಾಡುತ್ತಿದ್ದಾರೆ. ಜನಾರ್ದನ ರೆಡ್ಡಿ ನನ್ನನ್ನು ಫಿನಿಷ್ ಮಾಡಲು ಎಲ್ಲಾ ರೀತಿಯ ಹುನ್ನಾರ ನಡೆಸಿದ್ದರೂ ಎಂದು ಆರೋಪಿಸಿದರು. ಅದಕ್ಕೆ ನಾರಾ ಭರತ್ ರೆಡ್ಡಿ ಬಳ್ಳಾರಿಯ ಗಣಿಯನ್ನು ಲೂಟಿ ಮಾಡಿ ಪ್ರಸಿದ್ದಿಪಡೆದಿದ್ದಾರೆ. ನಾನು ಅವರನ್ನು ಸಾಯಿಸಲು ಹೋಗುವ ಹೇಡಿಯಲ್ಲ. ನನಗೂ ಗೊತ್ತು ಏನು ಮಾಡಬೇಕು ಎಂದು, ಆದರೆ ಅದನೆಲ್ಲ ಮಾಎಉವ ಮೂರ್ಕ ನಾನಲ್ಲ. ಅವರಷ್ಟು ಕೀಳುಮಟ್ಟಕತಕೆ ಇಳಿಯುವವನಲ್ಲ ಎಂದರು.
ಜನಾರ್ದನ ರೆಡ್ಡಿ ನಿವಾಸದ ಬಳಿ ಖಾಕಿ ಸರ್ಪಗಾವಲು ಹಾಕಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಳ್ಳಾರಿಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಪೋಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸ್ಥಳ ಸೇರಿ ನಗರದ ಸೂಕ್ಷ್ಮ ಪ್ರದೇಶಗಳ ಸುತ್ತಮುತ್ತ ಖಾಕಿ ಗಸ್ತು ತಿರುಗುತ್ತಿದ್ದಾರೆ. ಜನರನ್ನು ಚದುರಿಸುವ, ಗುಂಪುಗೂಡುವ ಜನರನ್ನು ಕದಲಿಸುವ ಕೆಲಸ ಮಾಡುತ್ತಿದ್ದಾರೆ
ಜನಾರ್ದನ ರೆಡ್ಡಿಯವರನ್ನು ಬಂಧಿಸಬೇಕು ಅಲಗಲಿಯ ತನಕ ಘಟನಾ ಸ್ಥಳದಿಂದ ಕದಲುವುದಿಲ್ಲ ಎಂದು ನಾರಾ ಭರತ್ ರೆಡ್ಡಿ ತಿಳಿಸಿದರು. ಘಟನೆಯ ಬಗ್ಗೆ ಗೃಹ ಸಚಿವರು ನಾರಾಗೆ ದೂರವಾಣಿ ಕರೆ ಮಾಡಿ ಸಂಪೂರ್ಣ ಮಾಹಿತಿ ಕಲೆಹಾಕಿದರು.