Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಶ್ವಸಂಸ್ಥೆಯಿಂದ ಬಸವಣ್ಣಗೆ ಸಿಗಲಿದೆ ಮನ್ನಣೆ

ಬೆಳಗಾವಿ: 'ಅದ್ವಿತೀಯ ನಾಯಕತ್ವ ಗುಣಗಳನ್ನು ಹೊಂದಿದ್ದ ಬಸವಣ್ಣ ಅವರಿಗೆ ಮುಂದೊಮ್ಮೆ ವಿಶ್ವಸಂಸ್ಥೆಯೂ ಮನ್ನಣೆ ನೀಡಲಿದೆ' ಎಂದು ಸಾಹಿತಿ ಡಾ.ಅವಿನಾಶ ಕವಿ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ದಾನಮ್ಮ ದೇವಿ ಮರಿಪುರಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'1948ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗವು ಒಬ್ಬ ನಾಯಕನಲ್ಲಿ ಇರಬೇಕಾದ ಗುಣಗಳ ಬಗ್ಗೆ ಘೋಷಣೆ ಮಾಡಿತು. ಆ ಪಟ್ಟಿಯಲ್ಲಿದ್ದ ಎಲ್ಲ ಗುಣಗಳು ಬಸವಣ್ಣ ಅವರಲ್ಲಿವೆ. ಅಂತೆಯೇ ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು ಸಿದ್ಧಪಡಿಸಿದ ಪಟ್ಟಿಯಲ್ಲಿನ ನಾಯಕತ್ವದ ಗುಣಗಳೂ ಬಸವಣ್ಣ ಅವರಲ್ಲಿವೆ. ಹಾಗಾಗಿ ಬಸವಣ್ಣ ಕೇವಲ ಕರ್ನಾಟಕದ ಸಾಂಸ್ಕೃತಿಕ ನಾಯಕ ಅಲ್ಲ. ಇಡೀ ಮಾನವ ಕುಲಕ್ಕೆ ಸಾಂಸ್ಕೃತಿಕ ನಾಯಕ. ಮುಂದೊಂದು ದಿನ ಇಡೀ ವಿಶ್ವ ಅವರನ್ನು ಗುರುತಿಸುತ್ತದೆ' ಎಂದರು.

ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಚನ ನೀಡಿದರು. ಮೃತ್ಯುಂಜಯ ಬೋಳಮಲ್ಲ ಇದ್ದರು. ಚನ್ನವೀರಸ್ವಾಮಿ ಹಿರೇಮಠ ಪ್ರವಚನ ನೀಡಿದರು. ದಾನಮ್ಮ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಿ.ಎಂ.ಕಿತ್ತೂರು ವಂದಿಸಿದರು. ರೋಹಿಣಿ ಬೆಂಬಳಗಿ ಮತ್ತು ರಾಜಶ್ರೀ ದೇಯಣ್ಣವರ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ