LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋಳಿ ಮಾಂಸ ಎಂದು ಹೇಳಿ ಬಾವಲಿ ಮಾಂಸ ಮಾರಾಟ: ಇಬ್ಬರ ಬಂಧನ!! ಬೌಬೌ ಬಿರಿಯಾನಿ ಬಳಿಕ ಇದೀಗ ಬಾವಲಿ ಸುಕ್ಕ, ಬಾವಲಿ ಚಿಲ್ಲಿ!!

ಚೆನ್ನೈ: ಬಾವಲಿಗಳ ಮಾಂಸವನ್ನು ಬೇಯಿಸಿ ಪದಾರ್ಥ ತಯಾರಿಸಿ ಅದನ್ನು ಕೋಳಿ ಮಾಂಸ ಎಂದು ಮಾರಾಟ ಮಾಡಿ ಜನರ ತಲೆಗೆ ಟೋಪಿ ಹಾಕುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಮಲ್ ಮತ್ತು ಸೆಲ್ವಂ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ತೋಪ್ಪುರ್‌ ರಾಮಸಾಮಿ ಅರಣ್ಯ ಪ್ರದೇಶದಲ್ಲಿ ದಿನಂಪ್ರತಿ ಗುಂಡಿನ ಸದ್ದು ಕೇಳುತ್ತಿತ್ತು ಆದರೆ ಈ ವಿಚಾರದ ಬಗ್ಗೆ ಜನರು ಮಾತ್ರ ತಲೆ ಕೆಡಿಸಿಕೊಂಡಿರಲಿಲ್ಲ, ಇತ್ತ ಅಲ್ಲಿನ ಸ್ಥಳೀಯ ನಿವಾಸಿಗಳಾದ ಕಮಲ್ ಹಾಗೂ ಸೆಲ್ವಂ ಎಂಬ ಇಬ್ಬರು ಮನೆಯಲ್ಲೇ ಚಿಕನ್ ಸುಕ್ಕ, ಚಿಕನ್ ಚಿಲ್ಲಿ ಪದಾರ್ಥಗಳನ್ನು ತಯಾರಿಸಿ ನಗರ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದರು.



ಅರಣ್ಯ ಪ್ರದೇಶದಲ್ಲಿ ಕೇಳಿ ಬರುತ್ತಿದ್ದ ಗುಂಡಿನ ಸದ್ದಿನ ಬಗ್ಗೆ ಅದೇ ಗ್ರಾಮದ ವ್ಯಕ್ತಿಯೊಬ್ಬರು ಪೊಲೀಸ್‌ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪೊಲೀಸರು ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೂ ಮುಟ್ಟಿಸಿದ್ದಾರೆ. ಅದರಂತೆ ಒಂದು ದಿನ ಕಾಡಿನಲ್ಲಿ ಅಧಿಕಾರಿಗಳು ಕಾದು ಕುಳಿತ್ತಿದ್ದು ಈ ವೇಳೆ ಇಬ್ಬರು ಕಾಡಿನಲ್ಲಿರುವ ಬಾವಲಿಗಳನ್ನು ಗುಂಡಿಕ್ಕಿ ಬೇಟೆಯಾಡುವುದು ಗಮನಕ್ಕೆ ಬಂದಿದೆ ಕೂಡಲೇ ಅವರಿಬ್ಬರನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಭಯಾನಕ ಸತ್ಯ ಬಾಯ್ದಿಟ್ಟಿದ್ದಾರೆ.

ಕೋಳಿ ಮಾಂಸ ಎಂದು ಬಾವಲಿ ಮಾಂಸ ಮಾರಾಟ:

ಪೊಲೀಸರ ತನಿಖೆ ವೇಳೆ ಈ ಇಬ್ಬರು ವ್ಯಕ್ತಿಗಳು ತಾವು ದಿನ ತೋಪ್ಪು‌ರ್ ರಾಮಸಾಮಿ ಅರಣ್ಯ ಪ್ರದೇಶದಲ್ಲಿ ಬಾವಲಿಗಳನ್ನು ಬೇಟೆಯಾಡಿ ಅದರ ಮಾಂಸದಿಂದ ಸುಕ್ಕ, ಚಿಲ್ಲಿ ತಯಾರಿಸಿ ಅದನ್ನು ನಗರ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಚಿಕನ್ ಸುಕ್ಕ, ಚಿಕನ್ ಚಿಲ್ಲಿ ಎಂದು ಹೇಳಿ ಮಾರಾಟ ಮಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ. ಇದನ್ನು ಕೇಳಿದ ಪೊಲೀಸ್, ಅರಣ್ಯ ಇಲಾಖೆ ಅಧಿಕಾರಿಗಳೇ ದಂಗಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಮಲ್ ಹಾಗೂ ಸೆಲ್ವಂ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026