LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛ ಸರ್ವೇಕ್ಷಣ್-2023ರ ಪಟ್ಟಿಯಲ್ಲಿ ಬಿಬಿಎಂಪಿಗೆ ಮೊದಲ ಸ್ಥಾನ 

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಸ್ತುತ ಸಾಲಿನಲ್ಲಿ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳಲ್ಲಿ ವರ್ಗೀಕರಿಸಲಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ 125ನೇ ಸ್ಥಾನವನ್ನು ಪಡೆದಿದೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ವತಿಯಿಂದ ವಾರ್ಷಿಕ ಸ್ಚಚ್ಛತಾ ಸಮೀಕ್ಷೆ ನಡೆಸುತ್ತಿದ್ದು ಪ್ರಸ್ತುತ ಸಾಲಿನ ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆಯಲ್ಲಿ ನಗರಗಳನ್ನು 1 ಲಕ್ಷ ಜನಸಂಖ್ಯೆಯ ಒಳಗೆ ಹಾಗೂ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳು ಎಂಬುದಾಗಿ ವರ್ಗೀಕರಿಸಿ ಅದರಂತೆ ಶ್ರೇಯಾಂಕಗಳನ್ನು ನೀಡಲಾಗಿರುತ್ತದೆ.

ಕಳೆದ ಸಾಲಿನ ಸಮೀಕ್ಷೆಯಲ್ಲಿ ನಗರಗಳನ್ನು 10 ಲಕ್ಷ ಮೇಲ್ಪಟ್ಟ ನಗರ ಅಡಿಯಲ್ಲಿ ವರ್ಗೀಕರಿಸಲಾಗಿದ್ದು, ಸದರಿ ಸಮೀಕ್ಷೆಯಲ್ಲಿ ನಗರವು 45 ನಗರಗಳ ಪೈಕಿ 43ನೇ ನಗರವಾಗಿರುತ್ತದೆ.

1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳ ಮಾನದಂಡವನ್ನು 2017ನೇ ಸಾಲಿನಿಂದ 2020ನೇ ಸಾಲಿನ ವರೆಗೆ ಅನ್ವಯಿಸಲಾಗಿರುತ್ತದೆ. 2017ನೇ ಸಾಲಿನಲ್ಲಿ 210ನೇ ಸ್ಥಾನ, 2018ನೇ ಸಾಲಿನಲ್ಲಿ 216ನೇ ಸ್ಥಾನ, 2019ನೇ ಸಾಲಿನಲ್ಲಿ 194ನೇ ಸ್ಥಾನ ಮತ್ತು 2020ನೇ ಸಾಲಿನಲ್ಲಿ 214ನೇ ಸ್ಥಾನ ಪಡೆದಿದ್ದು, ಈ ಬಾರಿ 125ನೇ ಸ್ಥಾನಗಳಿಸಿದೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೋಲಿಸಿದಾಗ ಪಾಲಿಕೆಯು ಮೈಸೂರು, ಹುಬ್ಬಳ್ಳಿ ಧಾರವಾಡ ನಂತರ 3ನೇ ಸ್ಥಾನದಲ್ಲಿದ್ದು ,ರಾಜ್ಯದಲ್ಲಿಯೇ 3ನೇ ಸ್ವಚ್ಛ ನಗರವಾಗಿದೆ.

*ಇದೇ ಪ್ರಥಮ ಬಾರಿಗೆ ಬೆಂಗಳೂರು ನಗರಕ್ಕೆ ನೈರ್ಮಲ್ಯ ಸಮೀಕ್ಷೆಯಲ್ಲಿ ಉನ್ನತ ಶ್ರೇಯಾಂಕವಾದ ವಾಟರ್ + (Water +) ನೀಡಿದೆ*

Service Level Progress, Citizens Voice ಅಡಿಯಲ್ಲಿ ಪಾಲಿಕೆಯು ಉತ್ತಮವಾಗಿ ನಿರ್ವಹಿಸಿದ್ದು, ಸಾರ್ವಜನಿಕರು ಪಾಲಿಕೆಯೊಂದಿಗೆ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಸಹ ಉತ್ತಮ ಆಡಳಿತಕ್ಕೆ ಸ್ಫೂರ್ತಿಯಾಗಿದೆ ಎಂದು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮ