LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

ಬೆಂಗಳೂರಿನಲ್ಲಿ ನಿರ್ಮಾಣ ಹಂತದ BDA ಅಂಡರ್‌ಪಾಸ್ ಮಣ್ಣು ಕುಸಿತ ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ಶೋಚನೀಯ ಘಟನೆಯೊಂದು ಸಂಭವಿಸಿದ್ದು, ಬಿಡಿಎ ನಿರ್ಮಿಸುತ್ತಿದ್ದ ಅಂಡರ್‌ಪಾಸ್ ಕಾಮಗಾರಿ ವೇಳೆ ಭಾರಿ ಪ್ರಮಾಣದ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಮತ್ತೂ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ

ಡಾ. ರಾಜ್‌ಕುಮಾರ್ ಸ್ಮಾರಕದ ಬಳಿಯಿರುವ ಎಫ್‌ಟಿಐ (FTI) ವೃತ್ತದ ಸಮೀಪ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿ ಆಳದ ಬೃಹತ್ ಕಂದಕ ತೋಡಲಾಗಿತ್ತು. ಆರ್‌ಸಿಸಿ ಕಾಸ್ಟಿಂಗ್ ಕಾಮಗಾರಿ ಮುಂದುವರಿಸಲು ಕಂದಕದಲ್ಲಿ ಶೇಖರಣೆಯಾಗಿದ್ದ ನೀರನ್ನು ಮೋಟಾರ್ ಬಳಸಿ ಹೊರಹಾಕಲಾಗುತ್ತಿತ್ತು. ಈ ಸಮಯದಲ್ಲಿ ಏಕಾಏಕಿ ತಡೆಗೋಡೆಯ ಮಣ್ಣು ಕುಸಿಯಲಾರಂಭಿಸಿದೆ.

ಆ ಸಂದರ್ಭದಲ್ಲಿ ಒಟ್ಟು ಐವರು ಕಾರ್ಮಿಕರು ಕಂದಕದೊಳಗೆ ಕೆಲಸ ಮಾಡುತ್ತಿದ್ದರು. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆಯೇ ಮೂವರು ಕ್ಷಣಾರ್ಧದಲ್ಲಿ ಮೇಲೆ ಓಡಿಬಂದು ಪ್ರಾಣ ರಕ್ಷಿಸಿಕೊಂಡರು. ಆದರೆ, ದುರದೃಷ್ಟವಶಾತ್ ಇನ್ನುಬ್ಬರು ಕಾರ್ಮಿಕರು ಕ್ಷಣಮಾತ್ರದಲ್ಲಿ ಮಣ್ಣಿನ ರಾಶಿಯಡಿಯಲ್ಲಿ ಸಿಲುಕಿಕೊಂಡರು.

ರಕ್ಷಣಾ ಕಾರ್ಯಾಚರಣೆ ಮತ್ತು ಸಾವು-ನೋವು

ವಿಷಯ ತಿಳಿದ ತಕ್ಷಣ ನಂದಿನಿ ಲೇಔಟ್ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಪರಿಮಳ್ (31) ಎಂಬ ಕಾರ್ಮಿಕ ತೀವ್ರ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಕಾರ್ಮಿಕ ಸೋನಾರಾಮ್ (26) ಅವರನ್ನು ತಕ್ಷಣ ಕಣ್ವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಸದಾನಂದ್, ಸುನೀಲ್ ಮತ್ತು ಇಮ್ತಿಯಾಯಾಜ್ ಎಂಬ ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

24 ಗಂಟೆಯೊಳಗೆ ಪರಿಹಾರ ನೀಡಲು ಬಿಡಿಎ ಆಯುಕ್ತರ ಆದೇಶ

ದುರಂತದ ಕುರಿತು ಬಿಡಿಎ ಆಯುಕ್ತ ಕ್ಯಾಪ್ಟನ್ ಮಣಿವಣ್ಣನ್ ತೀವ್ರ ವಿಷಾದ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ತನಿಖೆ ಆರಂಭಿಸಿದ್ದಾರೆ. ಕಾಮಗಾರಿಯಲ್ಲಿ ನಿರ್ಲಕ್ಷ್ಯ ವಹಿಸಿದ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಯುಕ್ತರು, ಮೃತ ಕಾರ್ಮಿಕರ ಕುಟುಂಬಗಳಿಗೆ ಮುಂದಿನ 24 ಗಂಟೆಯೊಳಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಗಡುವು ನೀಡಿದ್ದಾರೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಸೂಚಿಸಿದ್ದು, ಸಮಗ್ರ ಘಟನೆಯ ವರದಿಯನ್ನು ತಕ್ಷಣ ಸಲ್ಲಿಸಲು ಉನ್ನತಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ybl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಗರದಲ್ಲಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ದಸಂಸ, ರೈತ ಸಂಘ ಧರಣಿ!ಸಾಗರದಲ್ಲಿ ಬಿ.ಎಡ್ ಅಂಕಪಟ್ಟಿ ನೀಡದ ಸಿಗಂದೂರೇಶ್ವರಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ!'ಮಲೆನಾಡು ರೈತರ ಸಮಸ್ಯೆ' ಪರಿಹಾರಕ್ಕೆ ತುರ್ತು ಸಭೆ ಕರೆಯಲು 'ಸಿದ್ಧರಾಮಯ್ಯ, ಬಿ.ಕೆ.ಹರಿಪ್ರಸಾದ್‌'ಗೆ ತೀ.ನ ಶ್ರೀನಿವಾಸ್ ಮನವಿ!ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಮಾಹಿತಿBIG NEWS: ‘VB–G RAM G ಯೋಜನೆ' ಅನುಷ್ಠಾನದಲ್ಲಿ ನಿಯಮಬಾಹಿರ ಒತ್ತಡ: ಆ.17ರಿಂದ ಅಸಹಕಾರ ಚಳವಳಿಗೆ 'PDO ಸಂಘ' ಕರೆ!BIG NEWS: ಬೆಂಗಳೂರಿನ ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ!ಉಚಿತ ಮದುಮಗಳ ಶೃಂಗಾರ ತರಬೇತಿಗೆ ಅರ್ಜಿ ಆಹ್ವಾನBREAKING: ರಾಜ್ಯ ಸರ್ಕಾರದಿಂದ ಹೋಟೆಲ್, ಧಾಬಾಗಳಲ್ಲಿ 'ನೈರ್ಮಲ್ಯ ಮುನ್ನೆಚ್ಚರಿಕೆ'ಗೆ ಹೊಸ ಮಾರ್ಗಸೂಚಿ ಪ್ರಕಟಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆಬೆಂಗಳೂರಿನ ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ