LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮಹಾನಗರ ಪಾಲಿಕೆ; ಬೃಹತ್ ತ್ಯಾಜ್ಯೋತ್ಪಾದಕರಿಗೆ ಸೂಚನೆ

ಬಳ್ಳಾರಿ,ಜೂ.27

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಪಾಲಿಕೆಯು ಸೂಚನೆ ನೀಡಿದ್ದು, ಬೃಹತ್ ಘನತ್ಯಾಜ್ಯೋತ್ಪಾದಕರು ದಿನವೊಂದಕ್ಕೆ 100 ಕೆಜಿ ಅಥವಾ ಅದಕ್ಕೂ ಹೆಚ್ಚಿನ ಘನತ್ಯಾಜ್ಯವನ್ನು ಉತ್ಪಾದಿಸುವಂತಹ ಉತ್ಪಾದಕರುಗಳು ಘನತ್ಯಾಜ್ಯ ನಿರ್ವಹಣಾ ಕರ್ತವ್ಯಗಳನ್ನು ತಾವೇ ನಿರ್ವಹಿಸಬೇಕು ಎಂದು ಪಾಲಿಕೆಯು ತಿಳಿಸಿದೆ.

ಘನತ್ಯಾಜ್ಯವನ್ನು ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ಅದರಲ್ಲಿ ಕೊಳೆಯಬಹುದಾದ ಜೈವಿಕ ತ್ಯಾಜ್ಯ, ಕೊಳೆಯಲಾರದಂತಹ ಜೈವಿಕ ರಹಿತ ತ್ಯಾಜ್ಯ, ಗೃಹೋತ್ಪಾದಕ ಹಾನಿಕಾರಕ ತ್ಯಾಜ್ಯ ಮೂಲದಲ್ಲಿಯೇ ವಿಂಗಡಿಸುವುದು ಒಳಗೊಂಡಂತೆ ಮತ್ತು ಕೊಳೆಯಬಹುದಾದ ಜೈವಿಕ ತ್ಯಾಜ್ಯಗಳ ಸಂಸ್ಕರಣಾ ಮತ್ತು ಔಪಚಾರಿಕ ವ್ಯವಸ್ಠೆಯನ್ನು ಪ್ರಕಟಣೆಗೊಂಡ 30 ದಿನಗಳೊಳಗಾಗಿ ತಮ್ಮ ಸಂಕೀರ್ಣ, ಆವರಣಗಳಲ್ಲಿ ಅನುಷ್ಟಾನಗೊಳಿಸಬೇಕು ಎಂದು ಮಹಾನಗರ ಪಾಲಿಕೆ ನಿರ್ದೇಶಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಬೃಹತ್ ತ್ಯಾಜ್ಯೋತ್ಪಾದಕರು ಪ್ರತಿ ದಿನವೊಂದಕ್ಕೆ ತಮ್ಮ ಆವರಣದಿಂದ 100 ಕೆಜಿಗಿಂತ ಕಡಿಮೆ ತ್ಯಾಜ್ಯವನ್ನು ಉತ್ಪಾದಿಸುತ್ತಿರುವರೆಂದು ಸ್ವಯಂ ಘೋಷಣೆ ಪತ್ರವನ್ನು ಜುಲೈ 25 ರೊಳಗಾಗಿ ಪಾಲಿಕೆಗೆ ಸಲ್ಲಿಸಬೇಕು. ನಂತರ ಸಲ್ಲಿಸಲಾಗುವ ಸ್ವಯಂ ಘೋóಷಣೆ ಪತ್ರವನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗುವುದು.

ಸ್ವಯಂ ಘೋಷಣೆಯು ಪರಿಶೀಲನೆಗೆ ಒಳಪಡಿಸಲಾಗುತ್ತದೆ ಮತ್ತು ಅದೇ ರೀತಿಯಲ್ಲಿಯೇ ವರ್ಗೀಕರಿಸಲಾಗುವುದು. ಒಂದು ವೇಳೆ ಸುಳ್ಳು ಎಂದು ಕಂಡು ಬಂದರೆ ದಂಡ ವಿಧಿಸಲಾಗುವುದು.

ಸಾರ್ವಜನಿಕರು ವಿವರವಾದ ಸೂಚನೆಗಳು ಹಾಗೂ ಮಾಹಿತಿಗಾಗಿ http://www.ballaricity.mrc.gov.in/ ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು