LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈನ ಮಹಿಳಾ ಮಂಡಳದಿಂದ ರೈಲ್ವೆ ನಿಲ್ದಾಣದಲ್ಲಿ ಬೆಂಚುಗಳು, ವಾಟರ್ ಕೂಲರ್ ಅಳವಡಿಕೆ

ಬೆಂಗಳೂರು; ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ಮಾರ್ಗದರ್ಶನದಲ್ಲಿ ವಿಜಯನಗರ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಮಂಡಳದಿಂದ ನಗರ ರೈಲು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಬೆಂಚುಗಳು ಮತ್ತು ವಾಟರ್ ಕೂಲರ್‌ಗಳನ್ನು ಅನಾವರಣಗೊಳಿಸಲಾಯಿತು.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ರಾಷ್ಟ್ರೀಯ ಅಧ್ಯಕ್ಷರಾದ ಸರಿತಾ ಡಾಗಾ ಮತ್ತು ಪ್ರಧಾನ ಕಾರ್ಯದರ್ಶಿ ನೀತು ಓಸ್ಟ್ವಾಲ್ ಸಾರಥ್ಯದಲ್ಲಿ ಈ ಜನೋಪಯೋಗಿ ಸೇವೆ ಕೈಗೊಳ್ಳಲಾಗಿತ್ತು.

ಬೆಂಗಳೂರು ವಿಭಾಗದ ನೈಋತ್ಯ ರೈಲ್ವೆ ವಿಭಾಗೀಯ ರೈಲ್ವೆ ಕಮರ್ಷಿಯಲ್ ವಿಭಾಗದ ವ್ಯವಸ್ಥಾಪಕರಾದ ನಿವೇದಿತ ಎಸ್. ಬಾಲರೆಡ್ಡಿಯವರ್, ಸ್ಟೇಷನ್ ವ್ಯವಸ್ಥಾಪಕರಾದ ಆರ್.ಕೆ. ರಮೇಶ್, ಕಮರ್ಷಿಯಲ್ ಇನ್ಸ್ ಪೆಕ್ಟರ್ ಸುಮಂತ್ ಕುಮಾರರೆಡ್ಡಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಸಂಚಾಲಕಿ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ವೀಣಾ ಬೈದ್, ರಾಷ್ಟ್ರೀಯ ಸಲಹೆಗಾರ್ತಿ ಮತ್ತು ಕರ್ನಾಟಕ ಉಸ್ತುವಾರಿ ಲತಾ ಜೈನ್, ವಿಜಯನಗರ ಸಭಾ ಅಧ್ಯಕ್ಷ ಮಂಗಲಜಿ ಕೋಚಾರ್, ಟಿಇಯುಪಿ ಅಧ್ಯಕ್ಷ ಕಮಲೇಶ್ಜಿ, ವಿಜಯನಗರ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಸಂಘದ ಅಧ್ಯಕ್ಷರಾದ ಮಂಜು ಗಾಡಿಯಾ, ಸಂಯೋಜಕಿ ಬರ್ಖಾ ಪುಗಾಲಿಯಾ, ಸಚಿವೆ ದೀಪಿಕಾ ಗೋಖ್ರು ಮತ್ತಿತರರು ಉಪಸ್ಥಿತರಿದ್ದರು.

ಅಖಿಲ ಭಾರತ ಥೇರಾಪಂತ್ ಮಹಿಳಾ ಮಂಡಲ್ ನಡಿ ದೇಶದ ಎಲ್ಲಾ ಶಾಖೆಗಳ ಮೂಲಕ ಕೇಂದ್ರ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯನ್ನು ಸರ್ಮಪಿಸುವ ಕಾರ್ಯಕ್ರಮ ನಡೆಸುತ್ತಿದೆ.

ದೇಶದಾದ್ಯಂತ ಕಳೆದ 50 ವರ್ಷಗಳಿಂದ ನಿರಂತರ ಮತ್ತು ಕ್ರಿಯಾಶೀಲವಾಗಿ ಸಾರ್ವಜನಿಕ ಸೇವೆ ಮಾಡುತ್ತಿದೆ. 75 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೇರಾ ಪಂಥ್ ಮಹಾ ಗುರುಗಳಾದ ಮಹಾಶ್ರಮಣ್ ಜೀ ಮಾರ್ಗದರ್ಶನದಲ್ಲಿ ಜನೋಪಯೋಗಿ ಕೆಲಸಗಳು ಸಾಗುತ್ತಿವೆ. ಹಿಂದೆ ಜನಪರ ಆಂದೋಲನಗಳಾದ ಕನ್ಯಾ ಸುರಕ್ಷಾ, ಭೇಟಿ ಬಚಾವೋ ಭೇಟಿ ಫಡಾವೋ, ಭ್ರೂಣಹತ್ಯೆ ತಡೆಗಟ್ಟುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ