LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪರಿಷತ್ ಚುನಾವಣೆಯಲ್ಲಿ ಭರತೇಶ್ ಕುಮಾರ್ ಗೆ ಜಯ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಪರಿಷತ್ ಚುನಾವಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದಂತಹ ಭರತೇಶ್ ಕುಮಾರ್ ಅವರು 350ಕ್ಕಿಂತ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದಾರೆ.

ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯಪರಿಷತ್ ಚುನಾವಣೆ ಮಂಗಳವಾರ ಕಬ್ಬನ್ ಉದ್ಯಾನವನದಲ್ಲಿರುವ ಕರ್ನಾಟಕ ರಾಜ್ಯ ನೌಕರರ ಸಂಘದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಿತು. ಇಲಾಖೆಯ ಸುಮಾರು 515ಕ್ಕಿಂತ ಹೆಚ್ಚು ಮತದಾರರು ಈ ಒಂದು ಇಲಾಖೆಯಲ್ಲಿದ್ದರು, ಅದರಲ್ಲಿ ಕ್ರಮ ಸಂಖ್ಯೆ 1 ಅಭ್ಯರ್ಥಿ ಆದಂತಹ ಭರತೇಶ್ ಕುಮಾರ್ ಅವರು ಹಾಗೂ ಕ್ರಮ ಸಂಖ್ಯೆ 2ರ ಅಭ್ಯರ್ಥಿ ರಂಗಯ್ಯ ಸ್ಪರ್ಧೆ ಮಾಡಿದ್ದರು. ಅದರಲ್ಲಿ ಭರತೇಶ್ ಕುಮಾರ್ ಅವರು 350ಕ್ಕಿಂತ ಹೆಚ್ಚು ಮತಗಳನ್ನು ಪಡೆಯುವ ಮೂಲಕ ರಾಜ್ಯ ಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ. 255 ಮತಗಳ ಅಂತರದಲ್ಲಿ ಅಮೋಘವಾಗಿ ಗೆದ್ದು ಬೀಗಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನೌಕರರ ಅಹವಾಲು,ಬೇಡಿಕೆಗಳ ಈಡೇರಿಕೆ ಬಗ್ಗೆ ಶ್ರಮವಹಿಸಿ ಕೆಲಸ ಮಾಡುತ್ತೇನೆ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸವನ್ನು ಹಾಗೂ ಅವರ ಸಮಸ್ಯೆಗಳಿಗೆ ಈಡೇರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಇನ್ನು ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಧ್ಯಕ್ಷರಾದಂತ ಷಡಕ್ಷರಿ ಅವರ ಒಂದು ತಂಡದೋಪಾದಿಯಲ್ಲಿ ನೌಕರರ ಬಹುದಿನಗಳ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟು, ಹೋರಾಟಗಳನ್ನು ಮಾಡುವ ಮೂಲಕ ಬೇಡಿಕೆ ಈಡೇರಿಸುವ ಕೆಲಸ ಮಾಡಲು ಇಚ್ಛಿಸುತ್ತೇವೆ ಎಂದರು.

ಇದೆ ವೇಳೆ ರಾಜ್ಯ ಸರ್ಕಾರಿ ನೌಕರರ ನಿಕಟಪೂರ್ವ ಅಧ್ಯಕ್ಷರಾದ ಎಸ್ ಷಡಕ್ಷರಿ ಅವರು ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಭರತೇಶ್ ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ನಂತರ ಷಡಕ್ಷರಿ ಮಾತನಾಡಿ, ನಮ್ಮ ಜೊತೆ ನೀವು ಕೈಜೋಡಿಸಿದ್ದೆ ಆದರೆ ಇಲಾಖೆಯಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಒಂದು ಟೀಮ್ ರೀತಿ ಕೆಲಸ ಮಾಡಿಕೊಂಡು ಹೋಗಬೇಕಾಗುತ್ತದೆ ಎಂದರು.

ರಾಜ್ಯ ಪರಿಷತ್ ಚುನಾವಣೆಯಲ್ಲಿ ಗೆದ್ದಿರುವ ಭರತೇಶ್ ಕುಮಾರ್ ಅವರಿಗೆ ಬೃಹತ್ ಹೂವಿನ ಮಾಲೆಯನ್ನು ಹಾಕುವ ಮೂಲಕ ಶುಭಾಶಯ ಕೋರಲಾಯಿತು. ಅಲ್ಲದೆ ಅಭಿಮಾನಿಗಳು, ಇಲಾಖೆಯ ಸಿಬ್ಬಂದಿ ವರ್ಗ ಜೈ ಕಾರ ಹಾಕಿ ವಿಶೇಷ ರೀತಿಯಲ್ಲಿ ಅಭಿನಂದಿಸಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್