Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BIG NEWS : ಸೆಪ್ಟೆಂಬರ್‌ ಮೊದಲ ವಾರದೊಳಗಾಗಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ : ಡಿಸಿಎಂ ಡಾ.ಜಿ.ಪರಮೇಶ್ವರ್ 

ಮೈಸೂರು : ರಾಜ್ಯದಲ್ಲಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ. ಇನ್ನೂ 15 ದಿನಗಳಿಗೆ ಪರಿಶೀಲನೆ ಮಾಡುತ್ತೇವೆ. ಆ ಬಳಿಕ ಕೆಲವು ತಾಲೂಕುಗಳು ಬರಪೀಡಿತ ಪ್ರದೇಶದ ವರ್ಗಕ್ಕೆ ಬರುವ ಸಾಧ್ಯತೆ ಇರುತ್ತದೆ. ಅವುಗಳ ಆಧಾರದ ಮೇಲೆ ಮತ್ತೆ ಘೋಷಣೆ ಮಾಡುತ್ತೇವೆ. 

ಈ ತಿಂಗಳ ಕೊನೆಗೆ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಕೇಂದ್ರಕ್ಕೆ ಬರ ವರದಿಯನ್ನು ಸಲ್ಲಿಸುತ್ತೇವೆ. ಬೆಳೆ ನಷ್ಟವನ್ನು ಅಂದಾಜು ಮಾಡಲಾಗುತ್ತಿದ್ದು, ಅದರ ಆಧಾರದ ಮೇಲೆ ಮೊಮೊರಾಂಡಮ್‌ ಅನ್ನು ಸಿದ್ಧಪಡಿಸುತ್ತೇವೆ. ಆ ಬಳಿಕ ಕೇಂದ್ರದಿಂದ ತಂಡಗಳು ಬಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುತ್ತಾರೆ. ನಂತರ ಬರ ಪರಿಹಾರ ಬಿಡುಗಡೆಯಾಗುತ್ತದೆ. 
 
ರೈತರಿಗೆ ಎಕರೆಗೆ ಏನು ಪರಿಹಾರ ಕೊಡಬೇಕು ಎಂಬ ಬಗ್ಗೆ ನಿರ್ಧಾರ ಮಾಡುತ್ತೇವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಗುಳೆ ತಪ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳುವುದು ನಮ್ಮ ಮೊದಲ ಆದ್ಯತೆ. ಈ ವಿಚಾರವಾಗಿ ಈಗಾಗಲೇ ಕ್ರಮಕೈಗೊಳ್ಳುತ್ತಿದ್ದೇವೆ. ರಾಜ್ಯದಲ್ಲಿ 2023ರಲ್ಲಿ ಉಂಟಾದ ಬರಗಾಲದಿಂದ  ₹39,000 ಕೋಟಿ ನಷ್ಟವಾಗಿತ್ತು. ₹18,000 ಕೋಟಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನಾವು ದೆಹಲಿಯಲ್ಲಿ ಹೋಗಿ ಪ್ರತಿಭಟನೆ ನಡೆಸಿ, ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ ₹3,500 ಕೋಟಿ ಬಿಡುಗಡೆ ಮಾಡಿದರು. ಈ ಬಾರಿ ಹಾಗಾಗಬಾರದು.  

ಈ ವರ್ಷ ನಾನು ಕೇಂದ್ರಕ್ಕೆ ಮನವಿಯನ್ನು ಮಾಡಿದ್ದೇನೆ. ಕಳೆದ ಬಾರಿಯ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಾವು ಮೆಮೊರಾಂಡಮ್‌ ಏನು ಸಲ್ಲಿಸುತ್ತೇವೆಯೋ ಅದನ್ನು ಬರ ಘೋಷಣೆಗಿರುವ ಮಾನದಂಡಗಳಂತೆ ಮಾಡಿದ್ದೇವೆ. ಅದನ್ನು ಪರಿಶೀಲಿಸಿ, ನಮಗೆ ಪರಿಹಾರ ಹಣವನ್ನು ಕೊಡಲಿ. ಎಸ್‌ಡಿಆರ್‌ಎಫ್‌ನಲ್ಲಿ ₹1,200 ಕೋಟಿ ಹಣವನ್ನು ಕೊಡಲು ತೀರ್ಮಾನ ಮಾಡಿದ್ದಾರೆ. ಇನ್ನೂ ಅದನ್ನು ನಮಗೆ ಕೊಡಬೇಕು. ನಮ್ಮದು 25% ಹಾಗೂ ಕೇಂದ್ರದಿಂದ 75% ಇರುತ್ತೆ. 1,200 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಅವರಿಗೆ ಹೇಳಿದ್ದೇವೆ. ಅದು ಬಿಡುಗಡೆಯಾದರೆ ನಾವು ನಮ್ಮ ರೈತರಿಗೆ ಪರಿಹಾರ ಕೊಡಲು ಅನುಕೂಲವಾಗುತ್ತದೆ. ಒಂದು ವಾರ ಅಥವಾ 10 ದಿನಗೊಳಗಾಗಿ ಹಣವನ್ನು ರೈತರಿಗೆ ಕೊಟ್ಟುಬಿಡುತ್ತೇವೆ. 

ಬಿಜೆಪಿಯವರು ರಾಜಕೀಯ ಮಾಡಿದ್ದಾರೆ

ನಾಗೇಂದ್ರ ಅವರು ಯಾವುದೇ ಅಪರಾಧವನ್ನು ಮಾಡಿಲ್ಲ. ಆದರೂ, ಅವರನ್ನು ಬಿಜೆಪಿಯವರು  ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜಕೀಯ ಮಾಡಿದ್ದಾರೆ. ನಾಗೇಂದ್ರ ಅವರು ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿ ಸರ್ಕಾರಕ್ಕೆ ಮುಜುಗರ ಆಗಬಾರದು ಎಂಬ ದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡುವ ಅಗತ್ಯ ಇರಲಿಲ್ಲ. ಸಿಬಿಐ, ಇಡಿ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರು ಇರಲಿಲ್ಲ. ನಾನು ಗೃಹ ಸಚಿವನಾಗಿದ್ದ ಕಾರಣ ಆ ಬಗ್ಗೆ ನನಗೆ ಮಾಹಿತಿ ಇದೆ. ಸುಮ್ಮನೆ ಅನಾವಶ್ಯಕವಾಗಿ ರಾಜಕಾರಣ ಮಾಡಿ ಅವರನ್ನು ರಾಜೀನಾಮೆ ಕೊಡುವಂತೆ ಮಾಡಿದ್ದಾರೆ. ನಾವು ಮುಂದಿನ ದಿನಗಳಲ್ಲಿ ವಸ್ತುಸ್ಥಿತಿಯ ಬಗ್ಗೆ ಜನಸಮುದಾಯಕ್ಕೆ ತಿಳಿಸುತ್ತೇವೆ. 

ಸದನದಲ್ಲೂ ಕಾನೂನಾತ್ಮಕವಾಗಿ ಪ್ರಶ್ನೆಗಳನ್ನು ಕೇಳಿ, ನಾವು ಉತ್ತರವನ್ನು ನೀಡುತ್ತೇವೆ ಎಂದು ವಿಪಕ್ಷಕ್ಕೆ ಹೇಳಿದ್ದೆವು. ನಿಮ್ಮಲ್ಲಿ ದಾಖಲೆಗಳು ಇದ್ದರೆ ಅದನ್ನು ಸದನಕ್ಕೆ ಹೇಳಿ, ಅದಕ್ಕೆ ಉತ್ತರ ನೀಡಲು ನಾವು ಸಮರ್ಥರಿದ್ದೇವೆ ಎಂದು ಹೇಳಿದ್ದೆವು. ಅವರಲ್ಲಿ ದಾಖಲೆಗಳೇ ಇಲ್ಲ, ಸುಖಾಸುಮ್ಮನೆ ರಾಜಕಾರಣ ಮಾಡಿದ್ದಾರೆ. ಸಿದ್ದರಾಮಯ್ಯನವರೆಲ್ಲಿ ಮೌನವಾಗಿದ್ದಾರೆ? ಅವರು ಸದನಕ್ಕೆ ಬಂದಿದ್ದರು. ಸದನದಲ್ಲಿ ಉಪಸ್ಥಿತರಿದ್ದರು. ಒಂದೆರಡು ತಿಂಗಳು ಆರಾಮವಾಗಿ ವಿಶ್ರಾಂತಿ ತೆಗೆದುಕೊಂಡು ಮತ್ತೆ ಚಟುವಟಿಕೆಯನ್ನು ಶುರು ಮಾಡುತ್ತಾರೆ.

https://twitter.com/i/status/2093598303925707246

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋರ್ಟ್ ಆದೇಶ ಉಲ್ಲಂಘನೆ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ FIR ದಾಖಲುದ್ವೈತ ಸಿದ್ಧಾಂತಕ್ಕೆ ವ್ಯವಸ್ಥಿತ ರೂಪ ನೀಡಿದ ಗುರುರಾಘವೇಂದ್ರರು: ಸಾಗರದಲ್ಲಿ ಡಾ.ಗುರುರಾಜ್ ಕಲ್ಲಾಪುರ ಅಭಿಪ್ರಾಯಬಿ.ನಾಗೇಂದ್ರ ರಾಜೀನಾಮೆ ದಲಿತ ಸಮುದಾಯಕ್ಕೆ ಸಂದ ಜಯ: ವಿಪಕ್ಷ ನಾಯಕ ಆರ್.ಅಶೋಕ್ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲಿ: ಸಚಿವ ಮಧು ಬಂಗಾರಪ್ಪ ಸವಾಲ್ನ್ಯಾಯಾಲಯಗಳ ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ: ಸಚಿವ ಮಧು ಬಂಗಾರಪ್ಪಮಿ.ಡಿಸಿಪಿ ಯುನಿಫಾರ್ಮ್ ನಲ್ಲಿ ಇದ್ದ ಮಾತ್ರಕ್ಕೆ ಜನರ ಸ್ವಾತಂತ್ರ್ಯ ಕಸಿಯಲಾಗದು : ವೈಟ್ ಫೀಲ್ಡ್ ಡಿಸಿಪಿಗೆ ಹೈಕೋರ್ಟ್ ತರಾಟೆ!ಕಲಬುರ್ಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ : ನೂತನ ಮೇಯರ್ ಆಗಿ ಅಜ್ಜಲ್ ಅಹಮದ್, ಉಪಮೇಯರ್ ಆಗಿ ಫರ್ಹಾನಾಜ್ ಆಯ್ಕೆBREAKING : RSS ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ನಲಪಾಡ್ ಗೆ ಜಾಮೀನು ಮಂಜೂರು ನಾಗೇಂದ್ರ ರಾಜೀನಾಮೆ ನಡುವೆಯೂ 'ಬಿಜೆಪಿ ಪಾದಯಾತ್ರೆ' ಫಿಕ್ಸ್: ಶ್ರೀರಾಮುಲು 'ಬಳ್ಳಾರಿ ಚಲೋ' ಪೋಸ್ಟರ್ ರಿಲೀಸ್!