ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್ ಕಮಿಷನರೇಟ್ ಹುದ್ದೆಗಳನ್ನ ಘೋಷಣೆ ಮಾಡಿದ್ದಾರೆ. ಮಾಣೆಕ್ ಶಾ ಮೈದಾನದಲ್ಲಿಂದು ನಡೆದ 80ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಿನ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿಗೆ 5 ಪ್ರತ್ಯೇಕ ಕಮಿಷನರೇಟ್ ಹುದ್ದೆಗಳನ್ನ ಘೋಷಿಸಿದರು.
ಬೆಂಗಳೂರಿಗೆ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕಮಿಷನರೇಟ್ ಮಾಡಲಾಗಿತ್ತು. ಈಗ ಅದನ್ನ ವಿಂಗಡಿಸಿ, ಅಗತ್ಯ ಇರುವ ಕಡೆ ಹೊಸ ಪೊಲೀಸ್ ಠಾಣೆಗಳನ್ನ ಸ್ಥಾಪಿಸಿ, ಕಾನೂನು ಸುವ್ಯವಸ್ಥೆಯನ್ನ ಇನ್ನಷ್ಟು ಉತ್ತಮವಾಗಿ ನೋಡಿಕೊಳ್ಳಲು ಸಾಧ್ಯವಾಗುವಂತೆ ಕಾರ್ಯಕ್ರಮ ರೂಪಿಸಿದ್ದೇವೆ. ಜೊತೆಗೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಕೊಡಲು ಜಿಬಿಎ, ಟ್ರಾಫಿಕ್ ಪೊಲೀಸ್ ಠಾಣೆ ವತಿಯಿಂದ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ತಿಳಿಸಿದರು.