LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್

ಮೈಸೂರು: ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ.

ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕೆ ಅಪಮಾನ ಮಾಡಿದ್ದರು ರಣವೀರ್ ಸಿಂಗ್. ರಣವೀರ್ ಸಿಂಗ್ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತಲ್ಲದೇ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ರಣವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ ಕೇಳುವಂತೆ ಹೈಕೋರ್ಟ್ ಸೂಚಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆ ಕೇಳುವುದಾಗಿ ರಣವೀರ್ ಸಿಂಗ್ ಹೇಳಿಕೆ ನೀಡಿದ್ದರು. ಇದೀಗ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಯ ಬಳಿ ಕ್ಷಮೆ ಕೇಳಿದ್ದಾರೆ.

ಗೋವಾನಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಚಲನಚಿತ್ರೋತ್ವದಲ್ಲಿ ವಿಶೇಷ ಅತಿಥಿಯಾಗಿ ರಣವೀರ್ ಸಿಂಗ್ ಭಾಗವಹಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಸಹ ವೇದಿಕೆಯ ಮುಂದೆ ಇದ್ದರು. ಈ ವೇಳೆ ರಿಷಬ್ ಶೆಟ್ಟಿ ಅವರನ್ನು ಮಾತನಾಡಿಸುವ ಸಂದರ್ಭದಲ್ಲಿ ಕಾಂತಾರಾ ಸಿನಿಮಾದ ದೈವದ ಬಗ್ಗೆ ಮಾತನಾಡುತ್ತಾ ದೈವವನ್ನು ಹೀಯಾಳಿಸಿ ಅನುಕರಣೆ ಮಾಡಿದ್ದರು. ರಣವೀರ್ ಸಿಂಗ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮರು ದಿನವೇ ರಣವೀರ್ ಸಿಂಗ್ ಕ್ಷಮೆ ಕೇಳಿದರಾದರೂ, ಈ ಬಗ್ಗೆ ಹೈಕೋರ್ಟ್​​ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ರಣವೀರ್ ಮಾಡಿರುವುದು ತಪ್ಪೆಂದು ತೀರ್ಮಾನಿಸಿ, ಚಾಮುಂಡಿ ದೇವಾಲಯದಲ್ಲಿ ಕ್ಷಮೆ ಕೇಳಬೇಕು ಎಂದು ಕೆಲ ವಾರಗಳ ಹಿಂದೆ ಸೂಚನೆ ನೀಡಿತ್ತು. ಆದರೆ ರಣವೀರ್ ಸಿಂಗ್ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಆದರೆ ಇದೀಗ ಬಾಲಿವುಡ್ ನಿಂದ ಬ್ಯಾನ್ ಸೇರಿದಂತೆ ಜೀವನದಲ್ಲಿ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಿದ್ದಂತೆ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿರುವ ರಣವೀರ್ ಸಿಂಗ್ ಚಾಮುಂಡಿ ದೇವಾಲಯದ ಗರ್ಭಗುಡಿಯಲ್ಲಿ ಕುಳಿತು ತಾಯಿಯ ಮುಂದೆ ಕ್ಷಮೆ ಯಾಚನೆ ಮಾಡಿದ್ದಾರೆ. ಅಲ್ಲದೆ, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಬ್ಯಾನ್ ಆದೇಶದಿಂದಾಗಿ ರಣವೀರ್ ಸಿಂಗ್ ಅವರು ಭಾರತದಲ್ಲಿ ಹೊಸ ಸಿನಿಮಾಗಳ ಶೂಟಿಂಗ್ ಮಾಡಲು ಅಥವಾ ಹೊಸ ಚಿತ್ರಗಳನ್ನು ನಿರ್ಮಿಸಲು ಸಾಧ್ಯವಾಗುವುದಿಲ್ಲ. ವಿವಾದ ಬಗೆಹರಿಯುವವರೆಗೂ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಗಿದೆ. ಧುರಂಧರ್ 2’ ಚಿತ್ರದ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಅವರಿಗೆ ಬಾಲಿವುಡ್‌ನಲ್ಲಿ ಭಾರಿ ಬೇಡಿಕೆ ಇತ್ತು. ಆದರೆ ಇದೇ ಸಂದರ್ಭದಲ್ಲಿ ಅವರ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರಣವೀರ್ ಸಿಂಗ್ ಈ ಹಿಂದೆ ತಾವು ಚಾಮುಂಡಿ ದೇವಿಗೆ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿಯ ಕ್ಷಮೆ ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ