LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರಿಗೆ ಸಚಿವ ಸ್ಥಾನ: ತಮಿಳುನಾಡಿನಲ್ಲಿ 59 ವರ್ಷಗಳ ನಂತರ ಸಚಿವ ಸಂಪುಟಕ್ಕೆ ಕಾಂಗ್ರೆಸ್ ಶಾಸಕರು ಸೇರ್ಪಡೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಂಪುಟದಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ನಾಳೆ ಸಚಿವರಾಗಿ ಇಬ್ಬರು ಕಾಂಗ್ರೆಸ್ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜೇಶ್ ಕುಮಾರ್ ಮತ್ತು ತಿರು ವಿಶ್ವನಾಥ್ ಅವರ ಹೆಸರನ್ನು ಎಐಸಿಸಿ ಪ್ರಕಟಿಸಿದೆ. ತಮಿಳುನಾಡಿನಲ್ಲಿ 59 ವರ್ಷದ ನಂತರ ಕಾಂಗ್ರೆಸ್ ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನಿಯೋಜಿತ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದುಕೊಂಡಿತು.  ಬಹುಮತಕ್ಕೆ 10 ಕಡಿಮೆಯಾಗಿ ನಂತರ ಐದು ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಮತ್ತು ಎಡರಂಗ, ವಿಸಿಕೆ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಬೆಂಬಲ ಪಡೆದುಕೊಂಡಿತು. ಮೇ 13 ರಂದು ನಡೆದ ವಿಶ್ವಾಸಮತಯಾಚನೆ ವೇಳೆ ಎಐಎಡಿಎಂಕೆ ಒಂದು ಬಣ ಬೆಂಬಲಿಸಿತು. ವಿಜಯ್ ಅವರನ್ನು 144 ಶಾಸಕರು ಬೆಂಬಲಿಸಿದರು. ಅವರಲ್ಲಿ 24 ಎಐಎಡಿಎಂಕೆ ಶಾಸಕರು ಸೇರಿದ್ದಾರೆ.

ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ಶಾಸಕರ ಸೇರ್ಪಡೆ ಇಲ್ಲ:

ಸಿಎಂ ವಿಜಯ್ ನೇತೃತ್ವದ ಸಚಿವ ಸಂಪುಟಕ್ಕೆ ಎಐಎಡಿಎಂಕೆ ಬಂಡಾಯ ನಾಯಕರನ್ನು ಸೇರಿಸಿಕೊಳ್ಳುವ ಬಗ್ಗೆ ತನ್ನ ನಿಲುವನ್ನು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬುಧವಾರ ಸ್ಪಷ್ಟಪಡಿಸಿದೆ.

ಎಐಎಡಿಎಂಕೆ ಪಕ್ಷಾಂತರಿಗಳನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ತಮ್ಮ ಪಕ್ಷವು ಟಿವಿಕೆಗೆ ಬೆಂಬಲ ನೀಡುವ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ತಮಿಳುನಾಡು ಸಿಪಿಐ(ಎಂ) ಕಾರ್ಯದರ್ಶಿ ಪಿ. ಷಣ್ಮುಗಂ ಕಟು ಎಚ್ಚರಿಕೆ ನೀಡಿದ ಒಂದು ದಿನದ ನಂತರ ಈ ಸ್ಪಷ್ಟನೆ ನೀಡಲಾಗಿದೆ.

ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ ತಮಿಳುನಾಡು ಸಚಿವ ಆಧವ್ ಅರ್ಜುನ, ಎಐಎಡಿಎಂಕೆ ಶಾಸಕರನ್ನು ಸಂಪುಟದಲ್ಲಿ ಸೇರಿಸಲಾಗುವುದಿಲ್ಲ ಮತ್ತು ಈ ಕುರಿತ ವರದಿಗಳು ಕೇವಲ ಊಹಾಪೋಹಗಳಾಗಿವೆ. ಮೈತ್ರಿಕೂಟದ ಭವಿಷ್ಯದ ಬಗ್ಗೆ ಹೇಳುವುದಾದರೆ ಟಿವಿಕೆ ನೇತೃತ್ವದ ಒಕ್ಕೂಟವು ಅಖಂಡವಾಗಿದೆ ಮತ್ತು ಸಿಎಂ ವಿಜಯ್ ಶೀಘ್ರದಲ್ಲೇ ಸಂಪುಟ ವಿಸ್ತರಣೆಯನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿಯವರು ಸಂಪುಟವು ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸಬೇಕೆಂದು ಬಯಸುತ್ತಾರೆ. ಬೆಂಬಲ ನೀಡಿದ ಪಕ್ಷಗಳು ಸಂಪುಟದಲ್ಲಿ ಪ್ರತಿನಿಧಿಸಬೇಕೆಂದು ಅವರು ಬಯಸುತ್ತಾರೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಸಿದ ಆಟಗಾರ ವಿರಾಟ್ ಕೊಹ್ಲಿBIG NEWS : ಧೂಮಪಾನಿಗಳಿಗೆ ಬಿಗ್ ಶಾಕ್ ; ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ |Cigarette Price Hike‘ಗ್ಯಾಸ್ ಸಿಲಿಂಡರ್’ ಬುಕ್ ಮಾಡುವಾಗ OTP ಬರುತ್ತಿಲ್ಲವೇ..ನಿಮ್ಮ ‘ಮೊಬೈಲ್‌’ನಲ್ಲಿ ಈ ಸೆಟ್ಟಿಂಗ್ಸ್ ಬದಲಾಯಿಸಿ !GOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ PF ಹಣ UPI ಮೂಲಕ ತಕ್ಷಣವೇ ಖಾತೆಗೆ ಜಮೆ !ಕೇಂದ್ರದಿಂದ ಬಿಜೆಪಿ ಸರ್ಕಾರ ಕಿತ್ತೆಸೆಯುತ್ತೇವೆ: ಮಮತಾ ಬ್ಯಾನರ್ಜಿ ಗುಡುಗುSHOCKING : ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದು ವಿಕೃತಿ ಮೆರೆದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್ |WATCH VIDEO‘IT’ ಉದ್ಯೋಗಿಗಳಿಗೆ ನಿರಾಸೆ ; ‘ಬೋನಸ್’ ಕುರಿತು ಇನ್ಫೋಸಿಸ್ ಮಹತ್ವದ ಘೋಷಣೆ |InfosysJOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 5,000 ಹುದ್ದೆಗಳಿಗೆ ಅರ್ಜಿ ಆಹ್ವಾನ |Bank of Baroda recruitment 2026JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2026BIG NEWS: ಸಿಎಂ ಜೋಸೆಫ್ ವಿಜಯ್ ಸರ್ಕಾರಕ್ಕೆ ಮತ್ತೆ ಆತಂಕ: ಬೆಂಬಲ ಹಿಂಪಡೆಯುವುದಾಗಿ ಸಿಪಿಐಎಂ ಬೆದರಿಕೆ