LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಬೆಂಗಳೂರಿನಲ್ಲಿ 35 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ; 8 ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಅಂತಾರಾಜ್ಯ ಮಟ್ಟದ ಬೃಹತ್​​ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಸೆನೆಗಲ್​ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್​​, ನೈಜೀರಿಯಾ ಮೂಲದ ಒಬಿಯಾನಿಜ್​ ರೀಟಾ, ದೆಹಲಿ ಮೂಲದ ರೀನಾ ಯಾದವ್​​, ದೆಬಾಶಿಶ್​ ಬ್ಯಾನರ್ಜಿ ಮತ್ತು ಬೆಂಗಳೂರಿನ ಪೆಡ್ಲರ್‌ಗಳಾದ ಧೀರಜ್​​, ಮೊಹಮ್ಮದ್​​ ಮನ್ಸೂರ್​​ ಹಾಗೂ ಅಬ್ದುಲ್​ ಸಮದ್​ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ 17.4 ಕೆ.ಜಿ. ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಶಯ ಬಾರದಂತೆ ಸೀರೆಗಳು, ಇಸ್ತ್ರಿ ಮಾಡಲು ಬಳಸುವ ಟೇಬಲ್‌ಗಳು ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಅಡಗಿಸಿ, ಸುಂದರವಾದ ಉಡುಗೊರೆಗಳಂತೆ ಆರೋಪಿಗಳು ಪ್ಯಾಕ್ ಮಾಡುತ್ತಿದ್ದರು. ನಂತರ ಅವುಗಳನ್ನು ಚಾಣಾಕ್ಷತನದಿಂದ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ಹೀಗೆ ಬೆಂಗಳೂರು ತಲುಪುವ ಮಾದಕವನ್ನು ನಿರ್ಜನ ಪ್ರದೇಶಗಳಲ್ಲಿ ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು.

ಹೆಬ್ಬಾಳದ ಆನಂದನಗರದ ಸಮೀಪ ಮಾದಕ ವಸ್ತಿಗಳನ್ನು ಮಾರಾಟ ಮಾಡುತ್ತಿದ್ದಾಗ ಮೂವರನ್ನು ವಶಕ್ಕೆ ಪಡೆದಿದ್ದ ಪೊಲೀಸರು 4 ಕೆ.ಜಿ. 300 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಬಳಿಕ ಸರ್ಜಾಪುರದ ಚೂಡಸಂದ್ರದಲ್ಲಿರುವ ಸ್ಥಳೀಯ ಪೆಡ್ಲರ್​ ಮೊಹಮ್ಮದ್​ ಮನ್ಸೂರ್​ ನಿವಾಸದ ಮೇಲೆ ದಾಳಿ ನಡೆಸಿದಾಗ 10 ಕೆ.ಜಿ ಎಂಡಿಎಂಎ ಪತ್ತೆಯಾಗಿತ್ತು. ​

ಅಬ್ದುಲ್ ಸಮದ್ ಎಂಬಾತನ ಹೆಣ್ಣೂರಿನ ನಿವಾಸದ ಮೇಲೆಯೂ ದಾಳಿ ನಡೆಸಿ 3.5 ಕೆ.ಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಯಿತು. ವಿಚಾರಣೆ ವೇಳೆ, ದೆಹಲಿ ಮತ್ತು ಹರಿಯಾಣದವರೆಗೂ ಆರೋಪಿಗಳ ಜಾಲ ವಿಸ್ತರಿಸಿರುವುದು ಬಯಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳ ವಿಶೇಷ ತಂಡ ದೆಹಲಿಯಲ್ಲಿ ಒಂದು ವಾರಕ್ಕೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಸಿದ ಆಟಗಾರ ವಿರಾಟ್ ಕೊಹ್ಲಿBIG NEWS : ಧೂಮಪಾನಿಗಳಿಗೆ ಬಿಗ್ ಶಾಕ್ ; ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ |Cigarette Price Hike‘ಗ್ಯಾಸ್ ಸಿಲಿಂಡರ್’ ಬುಕ್ ಮಾಡುವಾಗ OTP ಬರುತ್ತಿಲ್ಲವೇ..ನಿಮ್ಮ ‘ಮೊಬೈಲ್‌’ನಲ್ಲಿ ಈ ಸೆಟ್ಟಿಂಗ್ಸ್ ಬದಲಾಯಿಸಿ !GOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ PF ಹಣ UPI ಮೂಲಕ ತಕ್ಷಣವೇ ಖಾತೆಗೆ ಜಮೆ !ಕೇಂದ್ರದಿಂದ ಬಿಜೆಪಿ ಸರ್ಕಾರ ಕಿತ್ತೆಸೆಯುತ್ತೇವೆ: ಮಮತಾ ಬ್ಯಾನರ್ಜಿ ಗುಡುಗುSHOCKING : ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದು ವಿಕೃತಿ ಮೆರೆದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್ |WATCH VIDEO‘IT’ ಉದ್ಯೋಗಿಗಳಿಗೆ ನಿರಾಸೆ ; ‘ಬೋನಸ್’ ಕುರಿತು ಇನ್ಫೋಸಿಸ್ ಮಹತ್ವದ ಘೋಷಣೆ |InfosysJOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 5,000 ಹುದ್ದೆಗಳಿಗೆ ಅರ್ಜಿ ಆಹ್ವಾನ |Bank of Baroda recruitment 2026JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2026BIG NEWS: ಸಿಎಂ ಜೋಸೆಫ್ ವಿಜಯ್ ಸರ್ಕಾರಕ್ಕೆ ಮತ್ತೆ ಆತಂಕ: ಬೆಂಬಲ ಹಿಂಪಡೆಯುವುದಾಗಿ ಸಿಪಿಐಎಂ ಬೆದರಿಕೆ