ಪೊಲೀಸರು ತಡೆ ಹಿಡಿಯಲು ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದು ವಿದ್ಯಾರ್ಥಿಗಳು ಮುನ್ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿ ಹೋಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಲಾಠಿಪ್ರಹಾರ ನಡೆಸಿದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರತ್ತ ಚಪ್ಪಲಿ ಹಾಗೂ ಖಾಲಿ ನೀರಿನ ಬಾಟಲಿಗಳನ್ನು ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ವಾಟರ್ ಕ್ಯಾನನ್ ಬಳಸಿ ನೀರನ್ನು ಹಾರಿಸಿದಾಗ, ಕೆಲವು ವಿದ್ಯಾರ್ಥಿಗಳು ಚದುರಿ ಹೋಗದೆ, ಹಾರುತ್ತಿದ್ದ ನೀರಿಗೆ ಎದುರಾಗಿ ನಿಂತು ಕುಣಿದು ಕುಪ್ಪಳಿಸಿದ ವಿಚಿತ್ರ ದೃಶ್ಯವೂ ಕಂಡುಬಂತು.
ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಜಿಲ್ಲಾಡಳಿತ ಹಾಗೂ ನಗರ ಪೊಲೀಸರು ಬಿಗಿ ಭದ್ರತಾ ಕಾವಲು ಹಾಕಿದ್ದರು. ಪ್ರಮುಖ ರಸ್ತೆ ಹಾಗೂ ಜಂಕ್ಷನ್ಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಾಂಚಿಯ ಬಹುತೇಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಅಲ್ಲದೆ, ನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಲುಪುವುದನ್ನು ತಡೆಯಲು ಜಿಲ್ಲೆಯ ಗಡಿ ಭಾಗಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರು ತೀವ್ರ ವಾಹನ ತಪಾಸಣೆ ನಡೆಸಿದರು.
https://twitter.com/i/status/2086719601317191816