LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಇಡೀ ಕಾಂಗ್ರೆಸ್ ಸರ್ಕಾರವೇ ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಶರಣಾಗಿದೆ ; ಬಿಜೆಪಿ ವಾಗ್ಧಾಳಿ

ಬೆಂಗಳೂರು :   ಇಡೀ ಕಾಂಗ್ರೆಸ್ ಸರ್ಕಾರವೇ ದೆಹಲಿ ಹೈಕಮಾಂಡ್‌ ಮುಂದೆ ಮಂಡಿಯೂರಿ ಶರಣಾಗಿದೆ ಎಂದು  ಬಿಜೆಪಿ ವಾಗ್ಧಾಳಿ ನಡೆಸಿದೆ.ಕರ್ನಾಟಕ ಕಾಂಗ್ರೆಸ್ ಸರ್ಕಾರ ದೆಹಲಿ ಹೈಕಮಾಂಡ್ ಮುಂದೆ ಶರಣಾಗಿದೆಯೇ? ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ತೀವ್ರ ವಾಗ್ಧಾಳಿ ನಡೆಸಿದೆ. ನಾಯಕರ ಕುರ್ಚಿ ಕಾಳಗದಿಂದಾಗಿ ರಾಜ್ಯದ ಅಭಿವೃದ್ಧಿ ಮರೆತ ಸರ್ಕಾರವನ್ನು ವಿಸರ್ಜಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ರಾಜ್ಯದಲ್ಲಿ ‘ಕುರ್ಚಿ ಕಾಳಗ’ ತಾರಕಕ್ಕೇರಿದ್ದು, ಕಾಂಗ್ರೆಸ್ ಸರ್ಕಾರ ದೆಹಲಿ ಬಾಗಿಲಲ್ಲಿ ಮಂಡಿಯೂರಿ ಕುಳಿತಿದೆ ಎಂದು ಬಿಜೆಪಿ ಲೇವಡಿ ಮಾಡಿದೆ. ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಅಧಿಕಾರ ಪಡೆಯುವ ಹಪಾಹಪಿಯಲ್ಲಿ ರಾಜ್ಯದ ಜನತೆ ಅನಾಥರಾಗಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ಇಡೀ @INCKarnataka ಸರ್ಕಾರವೇ ದೆಹಲಿ ಹೈಕಮಾಂಡ್‌ ಮುಂದೆ ಮಂಡಿಯೂರಿ ಶರಣಾಗಿದೆ! ರಾಜ್ಯದ ಅಭಿವೃದ್ಧಿಯನ್ನು ಗಾಳಿಗೆ ತೂರಿ, ನಾಯಕರ ‘ಕುರ್ಚಿ ಕಾಳಗ ತಾರಕಕ್ಕೇರಿದೆ.: ಡಿ.ಕೆ. ಶಿವಕುಮಾರ್: “ನನ್ನ ಕೂಲಿ ಕೊಡಿ” ಎಂದು ಗೋಗರೆಯುತ್ತಿದ್ದಾರೆ.: ಸಿದ್ದರಾಮಯ್ಯ: “ನನ್ನ ಕುರ್ಚಿ ಉಳಿಸಿಕೊಡಿ” ಎಂದು ಅಂಗಲಾಚುತ್ತಿದ್ದಾರೆ.: ಸತೀಶ್ ಜಾರಕಿಹೊಳಿ: ಕೆಪಿಸಿಸಿ ಅಧ್ಯಕ್ಷಗಿರಿಗೆ ಪಟ್ಟು ಹಿಡಿದು ಕುಳಿತಿದ್ದಾರೆ.: “ಪರಮೇಶ್ವರ್  &ಮಹದೇವಪ್ಪ ನಮಗೂ ಒಂದು ಚಾನ್ಸ್ ಕೊಡಿ” ಎಂದು ದೆಹಲಿ ಬಾಗಿಲು ತಟ್ಟುತ್ತಿದ್ದಾರೆ. ನಾಯಕರ ಈ ಅಧಿಕಾರದ ಹಪಾಹಪಿಯಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸರ್ಕಾರ ಅಸ್ಥಿರಗೊಂಡು, ಕರುನಾಡಿನ ಜನತೆ ಅನಾಥರಾಗಿ ಸಂಕಷ್ಟದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ ಎಂದು ಕಿಡಿಕಾರಿದೆ.

ಇನ್ನೊಂದು ಟ್ವೀಟ್ ಮಾಡಿದ ಬಿಜೆಪಿ  ‘ಮಾನ್ಯ ಜಾರಕಿಹೊಳಿಯವರೇ, ಸರ್ಕಾರವು ಪತನವಾಗುವ ಹಂತ ತಲುಪಿದೆಯೇ? ರಾಜ್ಯದ ಜನತೆ ನಿಮ್ಮ ಸರ್ಕಾರದ ವಿಸರ್ಜನೆಗೆ ಕಾಯುತ್ತಿದ್ದಾರೆ. ಸಿಎಂ ಮತ್ತು ಸಚಿವ ಸಂಪುಟದ ಮಂತ್ರಿಗಳಿಗಾಗಿ ರಾಜ್ಯದ ಜನತೆ ಹುಡುಕಾಟ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್‌ ಗೇಟು ಕಾಯುವ ಬದಲು ರಾಜ್ಯದಲ್ಲಿ ಸರಿಯಾಗಿ ಆಡಳಿತ ನಡೆಸಲಿ. ಇಲ್ಲದಿದ್ದರೆ ಸರ್ಕಾರವನ್ನೇ ವಿಸರ್ಜಿಸಲಿ’ ಎಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ನಿಂದ 1,200 ಕೋಟಿ ರೂಪಾಯಿ ಹೂಡಿಕೆ: ಮಹತ್ವದ ಒಪ್ಪಂದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಸಹಿಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ: ರಾಜ್ಯದ 5 ಹಿರಿಯ ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಭಟ್ಕಳ ಮುರಿನಕಟ್ಟೆ ವಿವಾದ: ಪೊಲೀಸರಿಂದ 4 ಕೇಸ್ ದಾಖಲು, 6 ಜನ ಅರೆಸ್ಟ್ಮೇ 28 ರಂದು ಮದ್ಯ ಮಾರಾಟ ನಿಷೇಧಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವುಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಕೆರೆ ಬಳಿ ಶವ ಎಸೆದು ಪರಾರಿSHOCKING: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವುಸೊಸೆ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ: ಮಾವನಿಗೆ ಜಾಮೀನುಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಒನ್‌-ಟೈಮ್‌ ಬಯೋಮೆಟ್ರಿಕ್‌ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ₹2,000 ಹಣ ಕಟ್‌BREAKING: ಬೆಂಗಳೂರಲ್ಲಿ ಮತ್ತೊಂದು ಕಾಂಪೌಂಡ್ ಗೋಡೆ ಕುಸಿತ ದುರಂತ: ಬಾಲಕ ಸಾವು, ಇಬ್ಬರು ಕಾರ್ಮಿಕರಿಗೆ ಗಾಯ