ಶಾಸಕತ್ವ ಅಮಾನತು ಆದೇಶ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ .!
ಬೆಂಗಳೂರು: ಗಾಲಿ ಜನಾರ್ಧನ ರೆಡ್ಡಿ ಅವರ ಶಾಸಕತ್ವ ಅಮಾನತು ಆದೇಶವನ್ನು ವಿಧಾನಸಭೆ ಹಿಂಪಡೆದಿದೆ.
ತೆಲಂಗಾಣ ಹೈಕೋರ್ಟ್ ಜನಾರ್ಧನ ರೆಡ್ಡಿ ಮೇಲಿನ ಶಿಕ್ಷೆಗೆ ತಡೆ ನೀಡಿರುವ ಬೆನ್ನಲ್ಲೇ ವಿಧಾನಸಭೆ ಜನಾರ್ಧನ ರೆಡ್ದಿ ಅವರ ಶಾಸಕತ್ವ ಅಮಾನತು ಆದೇಶ ವಾಪಸ್ ಪಡೆದಿದೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅವರಿಗೆ ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಅವರ ಶಾಸಕತ್ವ ಅಮಾನತುಗೊಳಿಸಲಾಗಿತ್ತು. ಶಿಕ್ಷೆಗೆ ತಡೆ ನೀಡಿದರೆ ಅಥವಾ ಶಿಕ್ಷೆ ರದ್ದಾದರೆ ಅಮಾನತು ಆದೇಶ ಹಿಂಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.