Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಿದ್ದು ವಿರುದ್ದ ಸೋಮಣ್ಣ ಸ್ಪರ್ಧೆ ; ಬಿಜೆಪಿ ಲೆಕ್ಕಾಚಾರ

ಬೆಂಗಳೂರು:
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ವರುಣಾ ಮತಕ್ಷೇತ್ರ ಈ ಬಾರಿ ರಾಷ್ಟ್ರದ ಗಮನ ಸೆಳೆದಿದೆ. ಈ ಮೊದಲು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಯಡಿಯೂರಪ್ಪ ಪುತ್ರನನ್ನು ಕಣಕ್ಕಿಳಿಸಲು ನಿರಾಕರಿಸಿದ್ದರು.
ಮೈಸೂರು ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ಸೋಮಣ್ಣ, ಲಿಂಗಾಯತ ಮಠಗಳ ಜತೆ ಒಡನಾಟ ಹೊಂದಿದ್ದು, ಈ ಕಾರಣಕ್ಕೆ, ವರುಣದಲ್ಲಿ ನಿಲ್ಲಿಸಿದರೆ ಪ್ರಬಲ ಎದುರಾಳಿಯನ್ನು ಕಣಕ್ಕೆ ಇಳಿಸಿ ದಂತಾಗುತ್ತದೆ ಎಂಬ ಲೆಕ್ಕಾಚಾರ ಇದರ ಹಿಂದೆ ಇದೆ ಎಂದು ಬಿಜೆಪಿ
ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರ ಶಿಫಾರಸನ್ನು ಗಂಭೀರವಾಗಿ ಪರಿಗಣಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸೋಮಣ್ಣ ಅವರಿಗೆ ಕರೆ ಮಾಡಿ, ಸ್ಪರ್ಧೆಗೆ ಅಣಿಯಾಗಿ ಎಂದು ಸಲಹೆ ನೀಡಿದ್ದಾರೆ ಎಂದೂ ಮೂಲಗಳು ತಿಳಿಸಿವೆ

ಬಿಜೆಪಿ ಇದೀಗ ಮತ್ತೋರ್ವ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರತ್ತ ದೃಷ್ಟಿ ಹರಿಸಿದೆ. ಇದಕ್ಕೆ ವರುಣಾ ಕ್ಷೇತ್ರದಲ್ಲಿರುವ ಲಿಂಗಾಯತ ಸಮುದಾಯದ ಪ್ರಾಬಲ್ಯ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವಿ. ಸೋಮಣ್ಣ, ವರುಣಾ ಕ್ಷೇತ್ರದ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸಮರ್ಥರು ಎಂಬುದು ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರವಾಗಿದೆ.

ವರುಣಾ ಕ್ಷೇತ್ರದಲ್ಲಿ ಸುಮಾರು 55 ಸಾವಿರದಷ್ಟು ಲಿಂಗಾಯತ ಮತದಾರರಿದ್ದಾರೆ. ಒಕ್ಕಲಿಗ ಸಮುದಾಯದ ಜನಸಂಖ್ಯೆ ಸುಮಾರು 12 ಸಾವಿರದಷ್ಟಿದೆ. 35 ಸಾವಿರದಷ್ಟು ಕುರುಬರು, 12 ಸಾವಿರದಷ್ಟು ಇತರ ಹಿಂದುಳಿದ ವರ್ಗಗಳ ಸಮುದಾಯದವರು, 43 ಸಾವಿರದಷ್ಟು ದಲಿತರು ಮತ್ತು ಸುಮಾರು 23 ಸಾವಿರದಷ್ಟು ನಾಯಕ ಸಮುದಾಯದ ಮತಗಳಿವೆ.

ಸಿದ್ದರಾಮಯ್ಯ ಕುರುಬ ಮತ್ತು ದಲಿತ ಮತ್ತು ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿದ್ದರೆ, ಬಿಜೆಪಿ ಲಿಂಗಾಯತ ಮತ್ತು ಒಕ್ಕಲಿಗ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಹೀಗಾಗಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದರೆ ಈ ಎರಡೂ ಸಮುದಾಯಗಳ ಮತಗಳನ್ನು ಸುಲಭವಾಗಿ ಪಡೆಯಬಹುದು ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

ರಾಜ್ಯ ಬಿಜೆಪಿ ಸರ್ಕಾರ ಇತ್ತೀಚಿಗಷ್ಟೇ ಒಕ್ಕಲಿಗರಿಗೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕಲ್ಪಿಸಿದೆ. ಅದೇ ರೀತಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲಾಗಿದ್ದು, ಎಸ್‌ಸಿ/ಎಸ್‌ಟಿ ಹಾಗೂ ದಲಿತ ಸಮುದಾಯದ ಬಹುಪಾಲು ಮತಗಳು ಸುಲಭವಾಗಿ ದೊರೆಯಲಿದೆ ಎಂಬ ವಿಶ್ವಾಸ ಬಿಜೆಪಿಗೆ ಇದೆ.

ಹೀಗಾಗಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸುವುದರಿಂದ ಲಿಂಗಾಯತ ಮತಗಳು ಮತ್ತು ಮೀಸಲಾತಿಯ ಕಾರಣಕ್ಕೆ ಒಕ್ಕಲಿಗ ಮತ್ತು ಹಿಂದುಳಿದ ವರ್ಗಗಳ ಮತಗಳನ್ನು ಸುಲಭವಾಗಿ ಬಾಚಿಕೊಳ್ಳಬಹುದು ಎಂಬುದು ಬಿಜೆಪಿ ಹೈಕಮಾಂಡ್‌ ವಾದವಾಗಿದೆ. ಸೋಮಣ್ಣ ಬೇರು ಮಟ್ಟದ ರಾಜಕಾರಣವನ್ನು ಚೆನ್ನಾಗಿ ಬಲ್ಲವರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ ಅನುಭವಿದೆ. ಈ ಎಲ್ಲ ಕಾರಣಗಳಿಂದಾಗಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣ ಅವರೇ ಪ್ರಬಲ ಅಭ್ಯರ್ಥಿ ಎಂಬುದು ಹೈಕಮಾಂಡ್‌ ಅನಿಸಿಕೆಯಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿರುವ ಸಿದ್ದರಾಮಯ್ಯ, ತಮ್ಮ ಕೊನೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ವರುಣಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ನಾಯಕನನ್ನು ಹಣಿಯಲು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಮಾಡಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ