Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಿಜೆಪಿ ಜನರನ್ನು ಫೂಲ್ ಮಾಡುತ್ತಿದೆ

 

ಬೆಂಗಳೂರು :
ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಫೂಲ್ ಮಾಡುತ್ತಲೇ ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಇದು.

ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಫೂಲ್ ಮಾಡುತ್ತಲೇ ಬಂದಿದೆ. ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಅಷ್ಟೂ ಭರವಸೆಗಳು ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡುವ ಪ್ರಯತ್ನ ಎಂದು ಹೇಳಿದರು.

ಬೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗುವುದು ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಆದರೆ ಮಾಡಲಿಲ್ಲ. ಈ ಕಾರಣಕ್ಕೆ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿಯಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಇನ್ನು ಒಕ್ಕಲಿಗರು ಹಾಗೂ ಲಿಂಗಾಯತರು ಕೂಡ ಕ್ರಮವಾಗಿ 12% ಹಾಗೂ 15% ಮೀಸಲಾತಿ ಹೆಚ್ಚಳಕ್ಕೆ ಆಗ್ರಹ ಮಾಡಿದ್ದು, ಕೇವಲ 2% ನೀಡುವುದಾಗಿ ಸರಕಾರ ಹೇಳಿದೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ಬೇರೆಯವರಿಗೆ ಕೊಟ್ಟಿದ್ದಾರೆ. 2 % ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾಡಿರುವ ಮೀಸಲಾತಿ ಹೆಚ್ಚಳ ಕಾನೂನು ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸಿಲ್ಲ. ಇವರು ಯಾವುದನ್ನು ಕಾನೂನು ಪ್ರಕಾರ ಮಾಡಿಲ್ಲ.

ಮಾಜಿ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಜನ ಗಲಾಟೆ ಮಾಡುತ್ತಿದ್ದಾರೆ ಎಂದರೆ ಸರ್ಕಾರದ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅರ್ಥ. ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಎಲ್ಲಾ ನಿರ್ಧಾರಗಳು ಜನರನ್ನು ಮೂರ್ಖರನ್ನಾಗಿಸುವ ಕ್ರಮ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ತಿಳಿಯಲಿದೆ. ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಸರ್ಕಾರದ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸಿ, ಎಲ್ಲರಿಗೂ ನ್ಯಾಯ ಒದಗಿಸಲಿದೆ.

ಸಿಇಸಿ ಸಭೆ ಯಾವಾಗ, 2ನೇ ಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಏಪ್ರಿಲ್ 4 ರಂದು ಸಿಇಸಿ ಸಭೆ ನಡೆಯಲಿದ್ದು, ನಾವು ದೆಹಲಿಗೆ ತೆರಳುತ್ತೇವೆ. 2ನೇ ಪಟ್ಟಿಯನ್ನು ನಾನು ಪ್ರಕಟಿಸುವುದಿಲ್ಲ. ಸಭೆಯಲ್ಲಿ ಚರ್ಚೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಲಿದ್ದಾರೆ' ಎಂದು ತಿಳಿಸಿದರು.

ಕೆಲವು ಕಡೆ ಗೊಂದಲ, ಸಾಮೂಹಿಕ ರಾಜೀನಾಮೆ ಕೊಡುವ ಬಗ್ಗೆ ಕೇಳಿದಾಗ, 'ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಯಾವುದೇ ಗೊಂದಲ ಇಲ್ಲ. ಬೇರೆ ಪಕ್ಷಗಳಲ್ಲಿ ಬೆದರಿಕೆ ತಂತ್ರ ನಡೆಯಬಹುದು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ. ಬಿಜೆಪಿಯಲ್ಲಿ ಬೆದರಿಕೆ ಇಲ್ಲವೇ? ಅವರು ಪಟ್ಟಿ ಪ್ರಕಟಿಸದಿರುವುದೇಕೆ? ದಿನಾಂಕ ಮುಂದೂಡುತ್ತಿರುವುದೇಕೆ? ಅವರ ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದೆ. ಜೆಡಿಎಸ್ ನಲ್ಲೂ ಆಂತರಿಕ ಸಮಸ್ಯೆ ಇದೇ ಕಾರಣಕ್ಕೆ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯನ್ನು ಜನ ತಿರಸ್ಕರಿಸಲಿದ್ದಾರೆ' ಎಂದು ತಿಳಿಸಿದರು.

ವಲಸಿಗ ಸಚಿವರು ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆಗೆ, 'ಅವರ ಪಕ್ಷದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ' ಎಂದು ತಿಳಿಸಿದರು.

ಸಚಿವ ಮುನಿರತ್ನ ಅವರ ಹೊಡೀರಿ ಬಡೀರಿ ಹೇಳಿಕೆ ಬಗ್ಗೆ ಕೇಳಿದಾಗ, 'ಕಾಂಗ್ರೆಸ್ ಪಕ್ಷದಿಂದ ಯಾರೇ ಮತ ಕೇಳಲು ಬಂದರೂ ಹೊಡೆದು ಓಡಿಸಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಸದರು ದೂರು ನೀಡಿದ್ದು, ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡೋಣ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಬೇಕು ಎಂದು ಸರ್ಜೇವಾಲ ಅವರ ಭಾಷಣಕ್ಕೆ ಅಡ್ಡಿ ಮಾಡಿದ ಬಗ್ಗೆ ಹಾಗೂ ಸಿದ್ದರಾಮಯ್ಯ ಅವರು 2 ಕಡೆ ಸ್ಪರ್ಧೆಗೆ ಟಿಕೆಟ್ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, 'ಕೇಳುವವರನ್ನು ಬೇಡ ಎನ್ನಲು ಸಾಧ್ಯವೇ? ನೀವು ಕೂಡ ಕೇಳಬಹುದು. ಅಭಿಮಾನಿಗಳು ಬಹಳ ಆಸೆಯಿಂದ ಕೇಳುತ್ತಾರೆ. ಅದರಲ್ಲಿ ತಪ್ಪಿಲ್ಲ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ' ಎಂದು ತಿಳಿಸಿದರು.

ವಿಜಯೇಂದ್ರ ವರುಣಾದಿಂದ ಸ್ಪರ್ಧಿಸಲ್ಲ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಯಡಿಯೂರಪ್ಪ ಅವರು ಬಿಜೆಪಿ ಸುದ್ದಿ ಮಾತನಾಡುತ್ತಾರೆ. ನಾನು ಕಾಂಗ್ರೆಸ್ ಪಕ್ಷದ ಸುದ್ದಿ ಮಾತ್ರ ಮಾತನಾಡುತ್ತೇನೆ' ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ