LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವದೆಹಲಿಯತ್ತ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

ನವದೆಹಲಿ : ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ವಿಮಾನ ರೋಮ್‌ನಲ್ಲಿ ಭಾನುವಾರ(ಫೆ.23) ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಈ ನಿರ್ಧಾರ ತಳೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.



ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯತ್ತ ತನ್ನ ಮಾರ್ಗ ಬದಲಿಸಿದೆ. ಇದರಲ್ಲಿ 280 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ನ್ಯೂಯಾರ್ಕ್ ನಿಂದ ಶನಿವಾರ(ಫೆ.22) ರಾತ್ರಿ 8-30ರ ಸಮಯದಲ್ಲಿ ಟೇಕ್ ಆಫ್ ಆದ ವಿಮಾನ ದೆಹಲಿಯತ್ತ ಹೊರಟಿಸಿದೆ. ಸುಮಾರು 10 ಗಂಟೆಗಳ ಹಾರಾಟದ ನಂತರ ವಿಮಾನವು ಕಪ್ಪು ಸಮುದ್ರದ ಬಳಿ ಹಠಾತ್ ಮಾರ್ಗವನ್ನು ಬದಲಾಯಿಸಿದೆ. ದಿಕ್ಕು ಬದಲಿಸಿದ ಅದು ರೋಮ್‌ನ ಫಿಮಿಸಿನೊ ವಿಮಾನ ನಿಲ್ದಾಣದ ಕಡೆಗೆ ಹೊರಟಿದೆ.



ಟಾಲಿಯನ್ ವಾಯುಪ್ರದೇಶ ಸಮೀಪಿಸಿದ ನಂತರ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಇಟಾಲಿಯನ್ ಯುದ್ದ ವಿಮಾನಗಳು ಬೆಂಗಾವಲು ಮಾಡಿದ್ದಾಗಿ  ವರದಿಯಾಗಿದೆ. ವಿಮಾನವು  ಭಾನುವಾರ 5:30ರ ವೇಳೆಗೆ ರೋಮ್‌ನಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನ ಹಾರಾಟದ ಮಧ್ಯದಲ್ಲಿ ಬಾಂಬ್ ಬೆದರಿಕೆ ಕರೆ ಬಂದಿರುವುದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಿಗೆ ಸಮಾದಿ ನಿರ್ಮಿಸಿದ ಕುಟುಂಬ - ನಡೆಯುತ್ತೆ ನಿತ್ಯ ಪೂಜೆ!ಬೆಂಗಳೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಐಟಿ ದಾಳಿಪೊಲೀಸ್ ಇನ್ಸ್ ಪೆಕ್ಟರ್ ಗೆ ಲವ್ ಲೆಟರ್ ಬರೆದು ಮಹಿಳೆ ಕಿರುಕುಳ; FIR ದಾಖಲುಬಿ.ಕಾಂ ವಿದ್ಯಾರ್ಥಿನಿ ಚಿಕ್ಕಮಗಳೂರಲ್ಲಿ ಹೃದಯಾಘಾತದಿಂದ ನಿಧನಡಿವೈಡರ್ ಗೆ ಡಿಕ್ಕಿ ಹೊಡೆದ ಫಾರ್ಚೂನರ್ ಕಾರು – ಸ್ಥಳದಲ್ಲೇ ನಾಲ್ವರು ಸಾವುವಿಎಯಿಂದ IPS ವರೆಗಿನ ಪ್ರೇಮ್ ಸುಖ್ ಜರ್ನಿಈ 3 ಜಾಗದಲ್ಲಿ ನವಿಲುಗರಿ ಇಡಿ..! ಮನೆ ತುಂಬಾ ಐಶ್ವರ್ಯ, ಸುಖ-ಸಮೃದ್ಧಿ ನೆಲೆಸುತ್ತೆಸೈಕಲ್ ಆಟವಾಡುತ್ತಿದ್ದ ಮಗು ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಸಾವು.!ಚಳ್ಳಕೆರೆ: ಹೊಸ ಸೇತುವೆ ನಿರ್ಮಾಣಕ್ಕೆ ಆದ್ಯತೆ -ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿದಾವಣಗೆರೆ: ಇಂದಿನಿಂದ  3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ