LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಲಕ ನಿಶ್ಚಿತ್‌ ಕೊಲೆ ಪ್ರಕರಣ: Spare driver ಕೃತ್ಯದ ಮಾಸ್ಟರ್ ಮೈಂಡ್

ಬೆಂಗಳೂರು: ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್‌ನನ್ನು (13) ಅಪಹರಿಸಿ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು.‌ ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಆಗ ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು. ಇಬ್ಬರ ಅಪಹರಣಕಾರರ ಕಾಲಿಗೆ ಗುಂಡೇಟು ಬಿದ್ದಿದೆ.

ಗುರುಮೂರ್ತಿ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕನ ಕುಟುಂಬವು ಈ ಹಿಂದೆ ಗುರುಮೂರ್ತಿಯನ್ನು ಸ್ಪೇರ್ ಡ್ರೈವರ್ ಆಗಿ ನೇಮಿಸಿಕೊಂಡಿತ್ತು. ಬುಧವಾರ ರಾತ್ರಿ 8 ಗಂಟೆಯಾದರೂ ತನ್ನ ಮಗ ಮನೆಗೆ ಹಿಂತಿರುಗದ ಕಾರಣ ಕಾಲೇಜು ಪ್ರಾಧ್ಯಾಪಕರಾಗಿರುವ ನಿಶ್ಚಿತ್ ಅವರ ತಂದೆ ಹುಳಿಮಾವು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ನಿಶ್ಚಿತ್ ಸೈಕಲ್ ಅರಕೆರೆಯ ಪ್ರೋಮಿಲಿ ಪಾರ್ಕ್ ಪ್ರದೇಶದಲ್ಲಿ ಬಿಟ್ಟು ಹೋಗಲಾಗಿತ್ತು.

ಬಾಲಕನನ್ನು ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹುಳಿಮಾವು ಠಾಣೆಗೆ ಪೋಷಕರು ಘಟನೆ‌ ಕುರಿತು ಮಾಹಿತಿ‌ ನೀಡಿದ್ದರು. ಒಂದೆಡೆ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು. ಮತ್ತೊಂದೆಡೆ ಪೋಷಕರು, ಆರೋಪಿಗಳಿಗೆ ₹5 ಲಕ್ಷ ನೀಡಿ ಮಗನನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದರು.‌ ಆದರೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದ ಆರೋಪಿಗಳು ಬಾಲಕನ್ನು ಕಗ್ಗಲಿಪುರದ ನಿರ್ಜ‌ನ ಪ್ರದೇಶಕ್ಕೆ ಕರೆದೊಯ್ದು ಕತ್ತು ಕೊಯ್ದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ. ಅಪಹರಣಕಾರರನ್ನು ಚಿಕಿತ್ಸೆಗಾಗಿ ಜಯನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026