Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BREAKING : ಬಿ.ನಾಗೇಂದ್ರ ರಾಜೀನಾಮೆ ಬೆನ್ನಲ್ಲೆ, ಸಚಿವ ಪ್ರಿಯಾಂಕ್ ಖರ್ಗೆ ಸರದಿ : HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ!

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಡೆದ ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ (ಎಇಇ) ಗ್ರೇಡ್-1 ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಇದರ ನೇರ ಹೊಣೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಹೊರಬೇಕು ಹಾಗೂ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಆಗ್ರಹಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಮುಖಾಂತರ ನಡೆದ ಈ ಪರೀಕ್ಷೆಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ಎಸಗಲ್ಪಟ್ಟಿವೆ ಎಂದು ಅವರು ದೂರಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, "ರಾಜ್ಯದಲ್ಲಿ ಪ್ರಿಯಾಂಕ್ ಕೃಪಾ ಪೋಷಿತ ಮಂಡಳಿ ನಡೆಯುತ್ತಿದ್ದು, ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಕರಣವಾಗಿದೆ," ಎಂದು ವಾಗ್ದಾಳಿ ನಡೆಸಿದರು. ಈ ಇಡೀ ಹಗರಣವನ್ನು ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಅವರೇ ಗೃಹ ಖಾತೆ ವಹಿಸಿಕೊಂಡವರಂತೆ ವರ್ತಿಸುತ್ತಿದ್ದಾರೆ ಎಂದ ಅವರು, ಕಾರ್ಬನ್ ಶೀಟ್ ಬಳಸಿ ಓಎಂಆರ್ ಶೀಟ್‌ಗಳನ್ನು ತಿದ್ದಿರುವ ಪ್ರಮುಖ ದಾಖಲೆಗಳು ಹಾಗೂ ತನಿಖಾ ವರದಿಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದರು.

ಕೆಪಿಎಸ್ಸಿಯಲ್ಲಿ ಪಾರದರ್ಶಕತೆ ತರುವ ಮಾತುಗಳನ್ನಾಡುವ ಸಚಿವರ ನಡವಳಿಕೆಯನ್ನು ಪ್ರಶ್ನಿಸಿದ ಕೇಂದ್ರ ಸಚಿವರು, ಒಂದು ಕಡೆ ಅಧಿಕಾರ ಸಿಕ್ಕರೆ ಕೆಪಿಎಸ್ಸಿಯನ್ನೇ ರದ್ದು ಮಾಡುವುದಾಗಿ ವೀರಾವೇಶದ ಮಾತುಗಳನ್ನಾಡುವ ಖರ್ಗೆ, ಇನ್ನೊಂದೆಡೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಅಂದಿನ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರೂ, ರಾಜ್ಯ ಸರ್ಕಾರಕ್ಕೆ ಕನಿಷ್ಠ ಒಂದು ಎಫ್‌ಐಆರ್ (FIR) ದಾಖಲಿಸಲು ಸಹ ಸಾಧ್ಯವಾಗಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮ ಮಾತಿನ ಮೇಲೆ ನಿಗಾ ಹಾಗೂ ಪಾರದರ್ಶಕತೆಯ ಮೇಲೆ ಗೌರವವಿದ್ದರೆ, ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋರ್ಟ್ ಆದೇಶ ಉಲ್ಲಂಘನೆ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ FIR ದಾಖಲುದ್ವೈತ ಸಿದ್ಧಾಂತಕ್ಕೆ ವ್ಯವಸ್ಥಿತ ರೂಪ ನೀಡಿದ ಗುರುರಾಘವೇಂದ್ರರು: ಸಾಗರದಲ್ಲಿ ಡಾ.ಗುರುರಾಜ್ ಕಲ್ಲಾಪುರ ಅಭಿಪ್ರಾಯಬಿ.ನಾಗೇಂದ್ರ ರಾಜೀನಾಮೆ ದಲಿತ ಸಮುದಾಯಕ್ಕೆ ಸಂದ ಜಯ: ವಿಪಕ್ಷ ನಾಯಕ ಆರ್.ಅಶೋಕ್ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲಿ: ಸಚಿವ ಮಧು ಬಂಗಾರಪ್ಪ ಸವಾಲ್ನ್ಯಾಯಾಲಯಗಳ ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ: ಸಚಿವ ಮಧು ಬಂಗಾರಪ್ಪಮಿ.ಡಿಸಿಪಿ ಯುನಿಫಾರ್ಮ್ ನಲ್ಲಿ ಇದ್ದ ಮಾತ್ರಕ್ಕೆ ಜನರ ಸ್ವಾತಂತ್ರ್ಯ ಕಸಿಯಲಾಗದು : ವೈಟ್ ಫೀಲ್ಡ್ ಡಿಸಿಪಿಗೆ ಹೈಕೋರ್ಟ್ ತರಾಟೆ!ಕಲಬುರ್ಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ : ನೂತನ ಮೇಯರ್ ಆಗಿ ಅಜ್ಜಲ್ ಅಹಮದ್, ಉಪಮೇಯರ್ ಆಗಿ ಫರ್ಹಾನಾಜ್ ಆಯ್ಕೆBREAKING : RSS ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ನಲಪಾಡ್ ಗೆ ಜಾಮೀನು ಮಂಜೂರು ನಾಗೇಂದ್ರ ರಾಜೀನಾಮೆ ನಡುವೆಯೂ 'ಬಿಜೆಪಿ ಪಾದಯಾತ್ರೆ' ಫಿಕ್ಸ್: ಶ್ರೀರಾಮುಲು 'ಬಳ್ಳಾರಿ ಚಲೋ' ಪೋಸ್ಟರ್ ರಿಲೀಸ್!