Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BREAKING : ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ 'OPS' ಜಾರಿ : ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಯೋಜನೆ (OPS) ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರದ ಮಟ್ಟದಲ್ಲಿ ಓಪಿಎಸ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ನೌಕರರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ರಾಜ್ಯದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದು, ಮುಂಬರುವ ದಿನಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಡಿಸಿಎಂ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ್ ಪ್ಯಾಲೆಸ್‌ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ' ಆಯೋಜಿಸಿದ್ದ 6ನೇ 'ರಾಜ್ಯಮಟ್ಟದ ಐಕ್ಯತಾ ಸಮಾವೇಶ' ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಇದೇ ವೇಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಪ್ರಸ್ತಾಪಿಸಿದ ಅವರು, ಸದ್ಯ ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಇದರೊಂದಿಗೆ ಬಾಕಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರದ ಹಂತದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುದೀರ್ಘ ಹೋರಾಟದ ಫಲವಾಗಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಈಗಿನ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಬ್ಯಾಕ್‌ಲಾಗ್ ಹುದ್ದೆಗಳನ್ನೂ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸಮನ್ವಯ ಸಮಿತಿಗೆ ಸೂಕ್ತ ಜಾಗ ಮಂಜೂರು ಮಾಡುವಂತೆ ಕೋರಲಾದ ಮನವಿಗೆ ಸ್ಪಂದಿಸಿದ ಅವರು, ಜಾಗ ಗುರುತಿಸಿ ನೀಡಿದರೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಚರ್ಚಿಸಿ ಜಾಗವನ್ನು ಮಂಜೂರು ಮಾಡಿಸಿಕೊಡುವುದಾಗಿ ತಿಳಿಸಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ನೌಕರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದಲ್ಲಿ ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿದ್ದರೂ ನಿಮ್ಮ ಬೇಡಿಕೆ ಹಾಗೂ ಸಮಸ್ಯೆಗಳು ಸೂಕ್ತ ರೀತಿಯಲ್ಲಿ ಮುಖ್ಯಮಂತ್ರಿ ತಲುಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಕೇಂದ್ರಗಳಿಗೆ ನಿಮ್ಮ ಧ್ವನಿ ತಲುಪಬೇಕಾದರೆ ಸಂಘಟನೆ ಮತ್ತಷ್ಟು ಗಟ್ಟಿಯಾಗಬೇಕು. ನೌಕರರೆಲ್ಲರೂ ಒಟ್ಟಾಗಿ ಶಕ್ತಿ ಪ್ರದರ್ಶಿಸಿದಾಗ ಮಾತ್ರ ಇಂತಹ ಐಕ್ಯತಾ ಸಮಾವೇಶಗಳಿಗೆ ನೈಜ ಅರ್ಥ ಬರುತ್ತದೆ ಎಂದು ಕಿವಿಮಾತು ಹೇಳಿದರು.

https://twitter.com/i/status/2093306253732888965

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋರ್ಟ್ ಆದೇಶ ಉಲ್ಲಂಘನೆ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ FIR ದಾಖಲುದ್ವೈತ ಸಿದ್ಧಾಂತಕ್ಕೆ ವ್ಯವಸ್ಥಿತ ರೂಪ ನೀಡಿದ ಗುರುರಾಘವೇಂದ್ರರು: ಸಾಗರದಲ್ಲಿ ಡಾ.ಗುರುರಾಜ್ ಕಲ್ಲಾಪುರ ಅಭಿಪ್ರಾಯಬಿ.ನಾಗೇಂದ್ರ ರಾಜೀನಾಮೆ ದಲಿತ ಸಮುದಾಯಕ್ಕೆ ಸಂದ ಜಯ: ವಿಪಕ್ಷ ನಾಯಕ ಆರ್.ಅಶೋಕ್ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲಿ: ಸಚಿವ ಮಧು ಬಂಗಾರಪ್ಪ ಸವಾಲ್ನ್ಯಾಯಾಲಯಗಳ ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ: ಸಚಿವ ಮಧು ಬಂಗಾರಪ್ಪಮಿ.ಡಿಸಿಪಿ ಯುನಿಫಾರ್ಮ್ ನಲ್ಲಿ ಇದ್ದ ಮಾತ್ರಕ್ಕೆ ಜನರ ಸ್ವಾತಂತ್ರ್ಯ ಕಸಿಯಲಾಗದು : ವೈಟ್ ಫೀಲ್ಡ್ ಡಿಸಿಪಿಗೆ ಹೈಕೋರ್ಟ್ ತರಾಟೆ!ಕಲಬುರ್ಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ : ನೂತನ ಮೇಯರ್ ಆಗಿ ಅಜ್ಜಲ್ ಅಹಮದ್, ಉಪಮೇಯರ್ ಆಗಿ ಫರ್ಹಾನಾಜ್ ಆಯ್ಕೆBREAKING : RSS ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ನಲಪಾಡ್ ಗೆ ಜಾಮೀನು ಮಂಜೂರು ನಾಗೇಂದ್ರ ರಾಜೀನಾಮೆ ನಡುವೆಯೂ 'ಬಿಜೆಪಿ ಪಾದಯಾತ್ರೆ' ಫಿಕ್ಸ್: ಶ್ರೀರಾಮುಲು 'ಬಳ್ಳಾರಿ ಚಲೋ' ಪೋಸ್ಟರ್ ರಿಲೀಸ್!