Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BREAKING : ರಾಜ್ಯ ಸರ್ಕಾರದಿಂದ 18 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ |Transfer

ಬೆಂಗಳೂರು: ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ವ್ಯಾಪ್ತಿಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ಒಟ್ಟು 18 ತಹಶೀಲ್ದಾರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರು ಈ ಅಧಿಸೂಚನೆ ಹೊರಡಿಸಿದ್ದು, ಸ್ಥಳ ನಿರೀಕ್ಷೆಯಲ್ಲಿದ್ದ ಅಧಿಕಾರಿಗಳಿಗೆ ಹುದ್ದೆ ನೀಡುವುದರ ಜೊತೆಗೆ ಹಲವು ತಾಲೂಕು ಮತ್ತು ನಿಗಮ-ಮಂಡಳಿಗಳ ಅಧಿಕಾರಿಗಳನ್ನು ಪರಸ್ಪರ ಬದಲಾಯಿಸಲಾಗಿದೆ.

ಪ್ರಮುಖ ಅಧಿಕಾರಿಗಳ ವರ್ಗಾವಣೆ ವಿವರ:

ಸಂಗಮೇಶ ಜಿಡಗ (ಗ್ರೇಡ್-2): ಬಳ್ಳಾರಿ ನಗರಾಭಿವೃದ್ಧಿ ಕೋಶದಿಂದ ಯಾದಗಿರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭಾ ತಹಶೀಲ್ದಾರ್ ಹುದ್ದೆಗೆ.

ಎಂ.ಆರ್. ಷಣ್ಮುಖ (ಗ್ರೇಡ್-2): ಕಾರಟಗಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.

 

ಶಾರದಾ ಬಿರಾದಾರ (ಗ್ರೇಡ್-2): ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಕಲಬುರಗಿಯ ಕೆಕೆಆರ್‌ಡಿಬಿ (KKRDB) ಆಪ್ತ ಕಾರ್ಯದರ್ಶಿಯಾಗಿ ನಿಯುಕ್ತಿ.

 

ಹೆಚ್.ಸಿ. ಸುಜಾತ (ಗ್ರೇಡ್-2): ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಹಶೀಲ್ದಾರ್ ಆಗಿ ನೇಮಕ.

 

ರುಕಿಯಾ ಬೇಗಂ (ಗ್ರೇಡ್-1): ಇವರ ಹಿಂದಿನ ವರ್ಗಾವಣೆ ಆದೇಶ ರದ್ದುಗೊಳಿಸಿ, ಸಾಲಿಗ್ರಾಮದಲ್ಲೇ ಮುಂದುವರಿಸಲಾಗಿದೆ.

 

ರೂಪ. ಡಿ (ಗ್ರೇಡ್-2): ಕರ್ನಾಟಕ ರಾಜ್ಯ ಹಣಕಾಸು ನಿಗಮದ (KSFC) ವಿಶೇಷ ತಹಶೀಲ್ದಾರ್ ಆಗಿ ವರ್ಗಾವಣೆ.

 

ನೀಲಬಾಯಿ ಲಮಾಣಿ (ಗ್ರೇಡ್-2): ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಸ್ಥಳನಿಯುಕ್ತಿ.

 

ಎಸ್.ಬಿ. ಕಾಯಲಿ (ಗ್ರೇಡ್-2): ಬೀಳಗಿಯಿಂದ ಜಮಖಂಡಿ ತಾಲೂಕು ತಹಶೀಲ್ದಾರ್ ಹುದ್ದೆಗೆ.

 

ಎಂ.ವಿ. ಬಿರಾದರ ಪಾಟೀಲ (ಗ್ರೇಡ್-2): ರಾಮದುರ್ಗದಿಂದ ಅಥಣಿ ತಾಲೂಕಿಗೆ ವರ್ಗಾವಣೆ.

 

ಆರ್.ಎಸ್. ವಳಸಂಗ (ಗ್ರೇಡ್-2): ಅಥಣಿಯಿಂದ ರಾಮದುರ್ಗ ತಾಲೂಕಿಗೆ ಅದಲು-ಬದಲು ವರ್ಗಾವಣೆ.

 

ಜಯಲಕ್ಷ್ಮಿ ವಸ್ತ್ರದ (ಗ್ರೇಡ್-1): ಗದಗ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.

 

ಜಿ.ಕೆ. ಮಂಜುನಾಂದ (ಗ್ರೇಡ್-2): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಹಶೀಲ್ದಾರ್ ಆಗಿ ನೇಮಕ.

 

ವಿ.ಎಸ್. ರವೀಂದ್ರ (ಗ್ರೇಡ್-2): ಬೆಂಗಳೂರು ಮಹಾನಗರ ಕಾರ್ಯಪಡೆ (BMTF) ತಹಶೀಲ್ದಾರ್ ಹುದ್ದೆಗೆ.

 

ಟಿ. ವಿನೋದ (ಗ್ರೇಡ್-1): ಮೈಸೂರಿನ ಯು.ಪಿ.ಓ.ಆರ್. (UPOR) ತಹಶೀಲ್ದಾರ್ ಆಗಿ ನೇಮಕ.

 

ನರಸಿಂಹಮೂರ್ತಿ ಟಿ.ಎನ್. (ಗ್ರೇಡ್-1): ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ.

 

ಡಿ.ಜೆ. ಕೋರಿ (ಗ್ರೇಡ್-2): ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿಯ ವಿಶೇಷ ತಹಶೀಲ್ದಾರ್ ಆಗಿ.

 

ಜೆ.ವಿ. ತುಳಸಿ (ಗ್ರೇಡ್-2): ಗುಡಿಬಂಡೆಯಿಂದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (KRDCL) ವರ್ಗಾವಣೆ.

 

ಕಾವ್ಯಶ್ರೀ ಹೆಚ್. (ಗ್ರೇಡ್-1): ಬೆಂಗಳೂರಿನ ಐ.ಎಂ.ಎ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಚೇರಿಯ ತಹಶೀಲ್ದಾರ್ ಆಗಿ ನಿಯುಕ್ತಿ.

 

ವರ್ಗಾವಣೆಗೊಂಡಿರುವ ಅಧಿಕಾರಿಗಳು ನಿಯೋಜಿತ ಸ್ಥಳಗಳಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಿ, ಚಾರ್ಜ್ ರಿಪೋರ್ಟ್ (CTC) ಅನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

news_1788484977_0_671.webp

 

news_1788484977_1_813.webp

 

news_1788484977_2_861.webp

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ: ಸಚಿವ ಕೃಷ್ಣ ಬೈರೇಗೌಡಕೆ.ಆರ್.ಐ.ಡಿ.ಎಲ್. ಆರೋಪ- ವರದಿ ಬಳಿಕ ಕ್ರಮ: ಸಚಿವ ಈಶ್ವರ ಖಂಡ್ರೆಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ: ಸಚಿವ ಈಶ್ವರ ಖಂಡ್ರೆಸಾಗರ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ದಾಳಿUPI ಪಾವತಿ ವೇಳೆ ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ? ವಾಪಸ್ ಪಡೆಯಲು ಹೀಗೆ ಮಾಡಿ!ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಧ್ಯಾಹ್ನ ‘ಶಿಕ್ಷಕರ ದಿನಾಚರಣೆ’ ಆಚರಿಸಲು ಸರ್ಕಾರ ಆದೇಶBIG NEWS : ನೌಕರರ ಗ್ರಾಚ್ಯುಟಿ ಹಣದಿಂದ ಬಾಕಿ ಮೊತ್ತ ಕಡಿತಗೊಳಿಸುವಂತಿಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶಗಮನಿಸಿ : ಪ್ರತಿಯೊಬ್ಬ ಭಾರತೀಯನ ಮೊಬೈಲ್’ನಲ್ಲೂ ಇರಬೇಕಾದ 5 ಸರ್ಕಾರಿ ಆ್ಯಪ್‌ಗಳಿವು.!ಬೆಂಗಳೂರಿಗರೇ ಗಮನಿಸಿ : 4 ಫ್ಲೈ ಓವರ್ ಗಳಲ್ಲಿ ಇಂದಿನಿಂದ ಈ ವಾಹನಗಳ ಸಂಚಾರ ಸಂಪೂರ್ಣ ನಿಷೇಧ.!ಬೆಂಗಳೂರಿನಲ್ಲಿ 'ಏರೋ ಇಂಡಿಯಾ 2027' ದಿನಾಂಕ ಪ್ರಕಟ: ಫೆಬ್ರವರಿ 8 ರಿಂದ 12 ರವರೆಗೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ!