Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BREAKING: ವಚನಾನಂದ ಸ್ವಾಮೀಜಿ ಜಾಮೀನು ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಪೋಕ್ಸೋ ಕೋರ್ಟ್!

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಧರ್ಮಾಧಿಕಾರಿ ವಚನಾನಂದ ಸ್ವಾಮೀಜಿಯವರಿಗೆ ನೀಡಲಾಗಿದ್ದ ಜಾಮೀನು ರದ್ದತಿಗೆ ಕೋರಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಶ್ರೀಗಳಿಗೆ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸದ್ಯಕ್ಕೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ

ಮಠದಲ್ಲಿದ್ದ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಿದ್ದ ವಚನಾನಂದ ಶ್ರೀಗಳಿಗೆ ಕಳೆದ ಜುಲೈ ತಿಂಗಳಲ್ಲಿ ಷರತ್ತುಬದ್ಧ ನಿಯಮಿತ ಜಾಮೀನು ಮಂಜೂರಾಗಿತ್ತು.

ಜಾಮೀನು ರದ್ದತಿಗೆ ಸಂತ್ರಸ್ತನ ತಾಯಿ ಅರ್ಜಿ

ಆದರೆ, ಸ್ವಾಮೀಜಿಯವರು ತಮ್ಮ ಪ್ರಭಾವ ಬಳಸಿ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಸಂತ್ರಸ್ತ ಬಾಲಕನ ತಾಯಿ, ಅವರ ಜಾಮೀನು ಆದೇಶವನ್ನು ಹಿಂಪಡೆಯಬೇಕೆಂದು ನ್ಯಾಯಪೀಠಕ್ಕೆ ಮರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ಹಿರಿಯ ವಕೀಲ ಎಸ್.ವಿ. ಪಾಟೀಲ್ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ಅರ್ಜಿದಾರರ ಮನವಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿತು.

ಸತ್ಯಕ್ಕೆ ಗೆಲುವು ನಿಶ್ಚಿತ ಎಂದಿದ್ದ ಶ್ರೀಗಳು

ಈ ಹಿಂದೆ ಜಾಮೀನಿನ ನಿಯಮಗಳನ್ನು ಪಾಲಿಸಿ ಕಾನೂನು ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಿದ್ದ ವಚನಾನಂದ ಸ್ವಾಮೀಜಿಯವರು, ಕಾನೂನಿನ ಮೇಲೆ ತಮಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದರು. ಸನ್ಯಾಸ ಜೀವನದ ಹಾದಿಯಲ್ಲಿ ಇಂತಹ ಅಪವಾದಗಳು, ನಿಂದನೆಗಳು ಹಾಗೂ ಕಠಿಣ ಪರೀಕ್ಷೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಂತಿಮವಾಗಿ ಸತ್ಯ ಮತ್ತು ಧರ್ಮಕ್ಕೇ ಜಯ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯದಾನ ನೀಡುವ ಸ್ಥಾನದಿಂದ ಅನ್ಯಾಯವಾಗಬಾರದು: ಸಿಎಂ ಡಿ ಕೆ ಶಿವಕುಮಾರ್GOOD NEWS: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಹುಬ್ಬಳ್ಳಿಯ ನೂತನ ಪೊಲೀಸ್ ಕಮಿಷನರ್‌ಗೆ ಕ್ರಿಮಿನಲ್ ಆರೋಪಿಗಳಿಂದ ಸನ್ಮಾನ: ಪೋಟೋ ವೈರಲ್!BIG NEWS: ರಾಜ್ಯದ ದೇವಾಲಯಗಳ ಆಸ್ತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: ಹೈಕೋರ್ಟ್ ಆದೇಶಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ₹61 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆBREAKING: ವಚನಾನಂದ ಸ್ವಾಮೀಜಿ ಜಾಮೀನು ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಪೋಕ್ಸೋ ಕೋರ್ಟ್!ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ವಿದ್ಯಾರ್ಥಿಗಳಿಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಕಿವಿಮಾತುಬೆಂಗಳೂರಲ್ಲಿ ಅಮೆಜಾನ್ ಅಕ್ರಮ ಗೋದಾಮುಗಳ ಮೇಲೆ FDA ದಾಳಿ: ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ಜಪ್ತಿ!ಇದು ಗರ್ಭದಲ್ಲಿರುವ ಭ್ರೂಣವನ್ನು ರಕ್ಷಿಸುವ ಶ್ರೀ ಗರ್ಭರಕ್ಷಾಂಬಿಕಾ ದೇವಿ ಕ್ಷೇತ್ರ: ಇರುವುದಾದರೂ ಎಲ್ಲಿ? ಇಲ್ಲಿದೆ ಓದಿ!