ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿರಂಜನ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಾರ್ ನಲ್ಲಿ ಕಿರಿಕ್ ಮಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಮಾರ್ಚ್ ೨೮ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಡೆಯ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್ ನಲ್ಲಿ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಲಾಗಿದೆ.
ಕೆಲದ ನಿಮಿತ್ತ ನಟ ಯಶಸ್ ಸೂರ್ಯ ಅವರ ನಿವಾಸಕ್ಕೆ ನಿರಂಜನ್ ತೆರಳಿದ್ದರಂತೆ. ಕೆಲಸ ಮುಗಿಸಿ ವಾಪಸ್ ಆಗುವಾಗ ಮಂತ್ರಿ ಅಲೈನ್ಸ್ ಬಳಿಯ ಬಾರ್ ಗೆ ಹೋಗಿದ್ದಾಗ ವ್ಯಕ್ತಿಯೋರ್ವ ನಿರಂಜನ್ ಅವರನ್ನು ತಳ್ಳಿದ್ದಾರೆ. ಈ ವೇಳೆ ಗಲಾಟೆಯಾಗಿದೆ.
ನೀನು ನಟನಾದರೆ ನಮಗೇನು? ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ. ಇದೇ ವೇಳೆ ನಾಲ್ವರು ಸ್ಥಳಕ್ಕಾಗಮಿಸಿ ನಿರಂಜನ್ ಮೇಲೆ ಹಲ್ಲೆ ನಡೆಸಿದ್ದಾರಂತೆ. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ;ಲಿ ನಿರಂಜನ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.