Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೀಪಾವಳಿ ಬೆನ್ನಿಗೆ BREAKING NEWS ಖಡಕ್ ಸಂದೇಶ ರವಾನಿಸಿದ ಶಾಸಕ

ಬೆಳಗಾವಿ:

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಕಾಲಕ್ಕೆ ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಕುಟುಂಬಗಳ ನಡುವೆ ತೀವ್ರ ವಾಕ್ಸಮರ ನಡೆದಿತ್ತು.

ಈ ಚುನಾವಣೆ ಗೆಲ್ಲಲು ಎರಡು ಕುಟುಂಬಗಳು ಇನ್ನಿಲ್ಲದ ಕಸರದ್ದು ನಡೆಸಿದ್ದವು. ಆ ಸಂದರ್ಭದಲ್ಲಿ ನಡೆದ ವಾಗ್ವಾದ, ವಾಕ್ಸಮರ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಸಮರ ಇನ್ನೂ ತಾರಕಕ್ಕೇರುವ ಲಕ್ಷಣಗಳು ಕಂಡುಬಂದಿವೆ. ಮಾಜಿ ಸಚಿವ ಹಾಗೂ ಶಾಸಕರು ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಗುರುವಾರ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿರುವುದು ಡಿಸಿಸಿ ಬ್ಯಾಂಕ್ ಚುನಾವಣೆ ಮಾಡು ಇಲ್ಲವೇ ಮಡಿ ಎಂಬಂತಾಗುವ ಸಾಧ್ಯತೆ ಇದೆ.

ದೀಪಾವಳಿ ನಂತರ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಗೆ ತಮ್ಮ ಬಣದ ಏಳು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು.

ನಮ್ಮನ್ನು ಹಾಗೂ ಜಾರಕಿಹೊಳಿ ಕುಟುಂಬವನ್ನು ಟೀಕಿಸುವವರಿಗೆ ಕಾನೂನು ಮೂಲಕ ಉತ್ತರ ಕೊಡುತ್ತೇವೆ. 20 ದಿನಗಳಿಂದ ನಮ್ಮ ವಿರುದ್ಧ ಬಹಳ ಮಾತನಾಡಿದ್ದಾರೆ. ನಾವು ನಿಂದಿಸುವುದಿಲ್ಲ. ಎಲ್ಲವನ್ನೂ ಕೇಳಿ ಸುಮ್ಮನಿದ್ದೇವೆ. ಆದರೆ ಇನ್ನೂ ಸುಮ್ಮನಿರುವುದಿಲ್ಲ. ಕಾನೂನು ಮೂಲಕ ಪ್ರತ್ಯುತ್ತರ ಕೊಡುತ್ತೇವೆ. ನಮ್ಮ ಕುಟುಂಬ ಮಾತ್ರವಲ್ಲ, ನಮ್ಮ ಪೆನಲ್ ಸದಸ್ಯರು ಕಾನೂನು ಸಮರಕ್ಕೆ ಮುಂದಾಗಲಿದ್ದಾರೆ. ಜಾರಕಿಹೊಳಿ ಕುಟುಂಬದ ಬಗ್ಗೆ ವೈಯಕ್ತಿಕ ತೇಜೋವಧೆ ಮಾಡುವವರ ಕುರಿತು ಏನು ಹೇಳುವುದಿಲ್ಲ. ದೀಪಾವಳಿ ನಂತರ ಕಾನೂನು ಹೋರಾಟ ನಡೆಯಲಿದ್ದು ಆಗ ಬ್ರೇಕಿಂಗ್ ಸುದ್ದಿ ಕೊಡುತ್ತೇವೆ ಎಂದು ಅವರು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಚುನಾವಣೆ ಕಾಲಕ್ಕೆ ನಡೆದ ಎದುರಾಳಿಗಳ ಆರೋಪಕ್ಕೆ ಸೂಕ್ತ ಉತ್ತರ ನೀಡುವುದಾಗಿ ಸಂದೇಶ ರವಾನಿಸಿದ್ದಾರೆ.

ಹಾಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರು ಆಗಿರುವ ಮಾಜಿ ಸಂಸದ ರಮೇಶ ಕತ್ತಿ ಅವರು ಬುಧವಾರ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಂತೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾವು ಚುನಾವಣೆಯನ್ನು ಎದುರಿಸುತ್ತೇವೆ. ಇಲ್ಲಿಯೂ ನಾವು ಕುದುರೆ ಹೂಡುತ್ತೇವೆ. ಅವರು ಹಿಡಿದು ಕಟ್ಟಿಹಾಕಲಿ ನೋಡೋಣ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು, ಚುನಾವಣೆ ಎಂದ ಮೇಲೆ ಸ್ಪರ್ಧೆ ಇದ್ದೇ ಇರುತ್ತದೆ. ಅವರು ಕುದುರೆ ಕಟ್ಟಿ ಹಾಕುತ್ತೇನೆ ಎಂದರೆ ಕಟ್ಟಿ ಹಾಕಲಿ. ಅವರಿಗೆ ಬೇಡ ಎಂದವರು ಯಾರು? ನಾವು ಸಹ ಕುದುರೆಯನ್ನು ಹೂಡುವ ಪ್ರಯತ್ನ ಮಾಡುತ್ತೇವೆ. ಅದನ್ನು ಕಟ್ಟಿ ಹಾಕುವ ಪ್ರಯತ್ನ ಅವರು ಮಾಡಲಿ ಎಂದು ತಿರುಗೇಟು ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ