ಬೆಂಗಳೂರು: ಮಹದೇಶ್ವರ ಬಡಾವಣೆಯಲ್ಲಿ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದ ಬೆನ್ನಲ್ಲೇ ಇದೀಗ ನರ್ಸ್ ಕೂಡ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಮಹದೇಶ್ವರ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ಆತ್ಮಹತ್ಯೆಗೆ ಶರಣಾದವರು. ಎರಡು ದಿನಗಳ ಹಿಂದೆ ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಇದೀಗ ಅದೇ ಆಸ್ಪತ್ರೆಯ ನರ್ಸ್ ನೇಣಿಗೆ ಶರಣಾಗಿದ್ದಾರೆ.
ವೈದ್ಯ ಹಾಗೂ ನರ್ಸ್ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669