LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

BREAKING : ಅಖಂಡ ಕರ್ನಾಟಕ ಬಂದ್ ಗು ಮುನ್ನವೇ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗಿನಿಂದಲೇ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಾಟಾಳ್ ನಾಗರಾಜ್ ಅವರು ಟೌನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ಹೊರಡುತ್ತಿದ್ದಂತೆಯೇ ಪೊಲೀಸರು ಅವರನ್ನು ತಡೆಯಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು.

ಪೊಲೀಸರು ತಡೆಯೊಡ್ಡುತ್ತಿದ್ದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ತಮ್ಮ ನಿವಾಸದ ಗೇಟ್ ಒಳಗಡೆಯೇ ಕುಳಿತು ಪಟ್ಟು ಹಿಡಿದರು. "ನಾನು ಮನೆಯಿಂದ ಆಚೆಯೇ ಬರುವುದಿಲ್ಲ, ವಶಕ್ಕೆ ಪಡೆಯುವ ಕಾರಣಕ್ಕಾಗಿ ಹೊರಬರಲ್ಲ" ಎಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ, ಸರ್ಕಾರದ ಧೋರಣೆಯನ್ನು ಖಂಡಿಸಿ ತಮ್ಮ ಬಾಯಿಗೆ ಸೆಲ್ಲೋ ಟೇಪ್ ಹಾಕಿಕೊಳ್ಳುವ ಮೂಲಕ ಅತ್ಯಂತ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಗಮನ ಸೆಳೆದರು.

ಪ್ರತಿಭಟನೆಯನ್ನು ಶಮನಗೊಳಿಸಲು ಸ್ಥಳಕ್ಕೆ ಆಗಮಿಸಿದ್ದ ಎಸಿಪಿ ತನ್ವೀರ್ ಹಾಗೂ ಡಿಸಿಪಿ ನೇಮಗೌಡ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಾಟಾಳ್ ಅವರ ಮನವೊಲಿಸಲು ತೀವ್ರ ಯತ್ನ ನಡೆಸಿತು. ಆದರೆ, ಸರ್ಕಾರದ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ ಅವರು, ಅಧಿಕಾರಿಗಳ ಯಾವುದೇ ವಿನಂತಿಗೂ ಜಗ್ಗಲಿಲ್ಲ. ಕೊನೆಗೆ ಅವರ ಮನವೊಲಿಕೆಗೆ ಒಪ್ಪದಿದ್ದಾಗ ಬೇರೆ ದಾರಿ ಕಾಣದೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಕರೆದೊಯ್ದರು.

ಇನ್ನೊಂದೆಡೆ, ಇಂದು ಬೆಳಿಗ್ಗೆ ವಾಟಾಳ್ ನಾಗರಾಜ್ ಅವರ ನಿವಾಸಕ್ಕೆ ಆಗಮಿಸಿದ್ದ ಬೆಂಬಲಿಗ ನಾರಾಯಣ್ ಸೇರಿದಂತೆ ಹಲವು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದು ಹೊಯ್ಸಳ ವಾಹನದಲ್ಲಿ ಕರೆದೊಯ್ದರು. ಪೊಲೀಸರ ಈ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು, ಸರ್ಕಾರ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕನ್ನಡಪರ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಸಿಕ್ಕ ಮೊಬೈಲ್‌ನಲ್ಲೂ 90 ಅಶ್ಲೀಲ ವಿಡಿಯೋಗಳು ಪತ್ತೆ!BREAKING : ಪಾಕಿಸ್ತಾನ & ಐಸಿಸ್ ಜೊತೆ ನಂಟು ಆರೋಪ : ಕಲಬುರ್ಗಿಯಲ್ಲಿ ಇಬ್ಬರು ಶಂಕಿತರು ಅರೆಸ್ಟ್!BREAKING : ಬೆಂಗಳೂರಿನ ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ನೀತಿಗೆ ಶೀಘ್ರವೇ ಕರಡು ಅಧಿಸೂಚನೆ!BIG NEWS: ಬೆಂಗಳೂರಿನ ಮಾಲೀಕರಿಗೆ GBA ಶಾಕ್: 'ಉಚಿತ ಪಾರ್ಕಿಂಗ್‌'ಗೆ ಬ್ರೇಕ್, ಗಂಟೆಗಳ ಲೆಕ್ಕದಲ್ಲಿ ಶುಲ್ಕ ಫಿಕ್ಸ್!ಪರಪ್ಪನ ಅಗ್ರಹಾರದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬಗ್ಗೆ ಡಿಐಜಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ!ವಿಧಾನಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ, ಬಿಜೆಪಿಯ ಮೇಲ್ಮನೆ ಸದಸ್ಯ ಪಿ.ಹೆಚ್. ಪೂಜಾರ್ಧಾರವಾಡ : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ಧಿ ಹೇಳಿದಕ್ಕೆ, ವಿಷ ಸೇವಿಸಿ ಯುವತಿ ಆತ್ಮಹತ್ಯೆಗೆ ಶರಣು!BIG NEWS : ಬಿಗ್ ಬಾಸ್ ಅಗ್ನಿಪರೀಕ್ಷೆಯಲ್ಲಿ ಜಡ್ಜ್ ಗಳ ಮನಗೆದ್ದು, ಈ ಇಬ್ಬರು ಅಚ್ಚರಿ ರೀತಿ ಎಂಟ್ರಿ!BREAKING : ರೇಣುಕಾ ಸ್ವಾಮಿ ಕೊಲೆ ಪ್ರಕರಣ: 59ನೇ CCH ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್BIG NEWS : ಜೈಲಲ್ಲಿ ಸಿಕ್ಕ ಮೊಬೈಲ್ ನಲ್ಲೂ ಅಶ್ಲೀಲ ವಿಡಿಯೋ ಪತ್ತೆ : VIP ಸೆಲ್ ನಿಂದ ಪ್ರಜ್ವಲ್ ಎತ್ತಗಂಡಿ!