LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ..!! ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಆಘಾತ

ಬೆಂಗಳೂರು: 2025-26 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಪ್ರಿಯರಿಗೆ ಮತ್ತೊಮ್ಮೆ ಆಘಾತ ನೀಡಿದ್ದಾರೆ.

ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ.

ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪ್ರೀಮಿಯಂ ಮದ್ಯದ ಬೆಲೆಗಳನ್ನು ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು. ಜೊತೆಗೆ ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು. ಇದರಿಂದ ಹೆಚ್ಚುವರಿ ಆದಾಯ ಸಂಗ್ರಹಣೆ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ತಂತ್ರಾಂಶವನ್ನು ರೂಪಿಸಲಾಗುವುದು. ಇದರಿಂದ ಆಡಳಿತದಲ್ಲಿ ದಕ್ಷತೆ ಹೆಚ್ಚಲಿದೆ. ಸಾರ್ವಜನಿಕ ಸೇವೆ ಸುಧಾರಿಸಲಿದೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!ಎಲ್ಲಾ ಹಿಂದುಳೀದ ಜಾತಿಗಳ ಸಮುದಾಯ ಸಂಘಗಳಿಗೆ  2.5 ಎಕರೆ ಜಮೀನು..!ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆಇಂದಿನ ವಚನ -ಅಮುಗೆ ರಾಯಮ್ಮ !ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!