LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ'- ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು :ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ಕೆಎಸ್‍ಆರ್‌ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು. ಇದು ಮುಖ್ಯಮಂತ್ರಿಗಳ ಕರ್ತವ್ಯ. ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹವನ್ನು ಮುಂದಿಟ್ಟರು. ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನೆ ಸಾರಿಗೆ ನೌಕರರ ಸಭೆ ಕರೆದಿದ್ದರು ಎಂದೂ ಅವರು ಆರೋಪಿಸಿದರು.

ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ? ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‍ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರೆ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ಗಡ್ಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ; ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026