Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಪುಟಸಭೆ ಒಪ್ಪಿಗೆ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಒಂದು ರಾಷ್ಟ್ರ, ಒಂದು ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಈ ಕುರಿತು ಸಮಗ್ರ ಮಸೂದೆಯನ್ನು ತರುವ ಸಾಧ್ಯತೆಯಿದೆ. ಬುಧವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಸಮರ್ಥನೆ ಮಾಡಿಕೊಂಡಿದ್ದು, ಆಗಾಗ ನಡೆಯುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರತಿಪಾದಿಸಿದರು.

ಲೋಕಸಭೆ ಚುನಾವಣೆ ಮುಗಿದರೆ ವಿಧಾನಸಭೆ ಚುನಾವಣೆ ಬರುತ್ತದೆ. ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಮುಗಿದಿದೆ. ಈಗ ದೆಹಲಿ ವಿಧಾನಸಭಾ ಚುನಾವಣೆಗಳು ಬರಲಿವೆ. ಇವು ಖರ್ಚುಗಳನ್ನು ಹೆಚ್ಚಿಸುವುದಷ್ಟೇ ಅಲ್ಲದೆ ಅಭಿವೃದ್ಧಿಗೂ ತೊಡಕು ಉಂಟುಮಾಡುತ್ತದೆ ಎಂದು ಚೌಹಾಣ್ ಹೇಳಿದ್ದರು.

ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಒಂದು ರಾಷ್ಟ್ರ, ಒಂದು ಚುನಾವಣೆಕಲ್ಪನೆಯನ್ನು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ವೆಚ್ಚವನ್ನು ನಿಯಂತ್ರಿಸಲು ಪರಿಣಾಮಕಾರಿ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.

ಹಲವಾರು ಸಂದರ್ಭಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯ ಬಗ್ಗೆ ಹೇಳುತ್ತಲೇ ಬಂದಿದ್ದಾರೆ. ಇದು ಸಮಯದ ಅಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ದೇಶಾದ್ಯಂತ ಒಮ್ಮತ ಮೂಡಿಸುವ ಕಸರತ್ತಿನ ನಂತರ ಹಂತ ಹಂತವಾಗಿ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯು ವ್ಯಾಪಕ ಸಮಾಲೋಚನೆ ನಡೆಸಿದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿಯನ್ನು ಸಲ್ಲಿಸಿತು. ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿಯ ಇತರ ಸದಸ್ಯರೆಂದರೆ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಮುಂತಾದವರು. ಒಂದು ರಾಷ್ಟ್ರ, ಒಂದು ಚುನಾವಣೆಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮೂರು ಮಸೂದೆಗಳನ್ನು ರೂಪಿಸಿದೆ.

ಪ್ರಸ್ತಾವಿತ ಸಂವಿಧಾನ ತಿದ್ದುಪಡಿ ಮಸೂದೆಗಳಲ್ಲಿ ಒಂದಾದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಲೋಕಸಭೆ ಮತ್ತು ವಿಧಾನಸಭೆಗಳಿಗೆ ಜೋಡಿಸುವ ಮಸೂದೆಗೆ ಕನಿಷ್ಠ ಶೇ. 50ರಷ್ಟು ರಾಜ್ಯಗಳಿಂದ ಅನುಮೋದನೆಯ ಅಗತ್ಯವಿರುತ್ತದೆ.
ಪ್ರಸ್ತಾವಿತ ಎರಡನೇ ಸಂವಿಧಾನ ತಿದ್ದುಪಡಿ ಮಸೂದೆಯು ಹೊಸ ವಿಧಿ 324
A ಅನ್ನು ಸೇರಿಸುವ ಮೂಲಕ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳ ಜೊತೆಗೆ ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ನಿಬಂಧನೆಗಳನ್ನು ರಚಿಸುತ್ತದೆ.

ಪುದುಚೇರಿ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಗಳನ್ನು ಹೊಂದಿರುವ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಮೂರು ಕಾನೂನುಗಳಲ್ಲಿನ ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಮೂರನೇ ಮಸೂದೆಯು ಸೂಚಿಸುತ್ತದೆ. ಈ ಸದನಗಳ ನಿಯಮಗಳನ್ನು ಇತರ ಶಾಸಕಾಂಗ ಸಭೆಗಳು ಮತ್ತು ಲೋಕಸಭೆಯೊಂದಿಗೆ ಜೋಡಿಸಲು ಪ್ರಸ್ತಾಪಿಸಲಾಗಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ