LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್’


ಬಳ್ಳಾರಿ,ಆ.16



ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯು ಅನುಕೂಲವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಹೇಳಿದರು.

ಬುಧವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿನ ರುಡ್‌ಸೆಟ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಬ್ಯಾಂಕ್ ಬೆಂಗಳೂರು ಪ್ರಧಾನ ಕಚೇರಿ ವತಿಯಿಂದ 78 ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಪ್ಯಾನ್ ಇಂಡಿಯಾ ಮೆಗಾ ಸಿಎಸ್‌ಆರ್ ಇನಿಶಿಯೇಟಿವ್ ಆಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ ಪರಿಚಯಿಸಿದ್ದು, ಹೆಣ್ಣುಮಕ್ಕಳ ಶಿಕ್ಷಣವನ್ನು ಅರ್ಥಪೂರ್ಣ ಅಭಿವೃದ್ಧಿಗೆ ಮೂಲಭೂತ ಅಗತ್ಯವೆಂದು ಪ್ರಚಾರ ಮಾಡಿದ ಸಂಸ್ಥಾಪಕ ಅಮ್ಮೆಂಬಳ ಸುಬ್ಬಾರಾವ್ ಪೈ ಅವರಿಗೆ ಗೌರವಾರ್ಥವಾಗಿ “ಕೆನರಾ ವಿದ್ಯಾ ಜ್ಯೋತಿ” ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಕೆನರಾಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಡಿ.ವಿ.ಪಿ.ಆರ್.ಮುರಳಿಕೃಷ್ಣ ಅವರು ಮಾತನಾಡಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು 78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ' ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು.

2013-14 ರಲ್ಲಿ ಸಿಎಸ್‌ಆರ್ ಉಪಕ್ರಮಗಳ ಅಡಿ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ವಿಸ್ತರಿಸಲು ಪ್ರಾರಂಭಿಸಲಾಯಿತು. ಬರು ಬರುತ್ತಾ 2015-16 ರಿಂದ ಗ್ರಾಮೀಣ, ಅರೆ-ನಗರ ಮತ್ತು ನಗರ ಶಾಖೆಗಳ ಮೂಲಕ ವಿಸ್ತರಿಸಲಾಯಿತು ಎಂದರು.

ಕಳೆದ 11 ವರ್ಷಗಳಲ್ಲಿ 95 ಸಾವಿರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.46 ಕೋಟಿ ಮೊತ್ತದೊಂದಿಗೆ ವಿದ್ಯಾರ್ಥಿವೇತನ ಒದಗಿಸಲಾಗಿದೆ. 2023-24 ರವರೆಗೆ 44742 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ರೂ.18 ಕೋಟಿ ನೀಡಿದೆ. ಇದುವರೆಗೆ ಒಟ್ಟು 139742 ಪ್ರಯೋಜನ ಪಡೆದ ವಿದ್ಯಾರ್ಥಿಗಳು, ಒಟ್ಟು ರೂ.64 ಕೋಟಿ ವಿತರಿಸಿದ ಮೊತ್ತವಾಗಿದೆ ಎಂದು ತಿಳಿಸಿದರು.

ಯೋಜನೆಯ ವಿವರ:

ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆಯಡಿ 2024-25ರ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವು ನೀಡಲಾಗುತ್ತಿದೆ ಮತ್ತು ಯೋಜನೆಯನ್ನು ಎಲ್ಲಾ ಗ್ರಾಮೀಣ, ಅರೆ-ನಗರ ಮತ್ತು ನಗರ ಶಾಖೆಗಳಲ್ಲಿ ಜಾರಿಗೊಳಿಸಲಾಗಿದೆ.

5, 6, 7, 8, 9 ಮತ್ತು 10 ನೇ ತರಗತಿಯಿಂದ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಂದ ತಲಾ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿವೇತನಕ್ಕಾಗಿ ಆಯಾ ವ್ಯಾಪ್ತಿಯ ಶಾಖೆಗಳು ಕಾರ್ಯ ಮಾಡುತ್ತವೆ.

ವಿದ್ಯಾರ್ಥಿವೇತನದ ಸಹಾಯವು 5, 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಪ್ರತಿ ವಿದ್ಯಾರ್ಥಿಗೆ ರೂ.3 ಸಾವಿರ ಮತ್ತು 8ನೇ, 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ ರೂ.5 ಸಾವಿರ ನೀಡಲಾಗುವುದು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ವೇದಾವತಿ, ಕೆನೆರಾ ಬ್ಯಾಂಕ್‌ನ ವ್ಯವಸ್ಥಾಪಕರು, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು