LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿ ಶಿಕ್ಷಣ ಮಾರ್ಗದರ್ಶನ ಸರಣಿ ಕಾರ್ಯಕ್ರಮ


ಶಿವಮೊಗ್ಗ, ಜೂನ್ 28, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು, ಪೆಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣಿ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜೂನ್ 28 ರಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 9.05ರಿಂದ 9.20ರವರೆಗೆ ಪ್ರಸಾರವಾಗಲಿದೆ.



ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣಿಗೆ ಶಿವಮೊಗ್ಗ ಸಂಸದರು ಹಾಗೂ ಪಿ.ಇ.ಎಸ್ ಸಮೂಹ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವೈ.ರಾಘವೇಂದ್ರ ಅವರಿಂದ ಚಾಲನೆ ಸಿಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ನ ಪರಿಣಿತರು, ಪ್ರಾಂಶುಪಾಲರು ಹಾಗೂ ಪ್ರತಿ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣಿ, ಆಕಾಶವಾಣಿ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ (52 ಕಾರ್ಯಕ್ರಮ) ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು FM 103.5 ಹಾಗೂ MW 675 khz ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತAkashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂAkashavani Bhadravathi YouTube ನಲ್ಲಿ ಪ್ರಸಾರ ನಂತರವೂ ಕೇಳಬಹುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು