LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಸರಾ ರಜೆಯಲ್ಲಿ ಜಾತಿ ಗಣತಿ ಸಮೀಕ್ಷೆ, ದಸರಾ ರಜೆ ವಿಸ್ತರಣೆ ಸಾಧ್ಯತೆ!

ರಾಜ್ಯದಲ್ಲಿ ಹೊಸದಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- ಜಾತಿ ಜನಗಣತಿಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಮುಂಬರುವ ದಸರಾ ರಜಾದಿನಗಳಲ್ಲಿ ಗಣತಿ ನಡೆಸಲು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ.


 

 


ಜಾತಿ ಗಣತಿಗೆ ಶಾಲಾ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳಲಿರುವ ಹಿನ್ನೆಲೆಯಲ್ಲಿ ದಸರಾ ರಜೆಯಲ್ಲಿ ಅವರ ಕರ್ತವ್ಯವನ್ನು ಬಳಸಿಕೊಳ್ಳಲು ಹಿಂದುಳಿದ ಆಯೋಗ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯಕ್ ಈ ಕುರಿತು ಮಾಹಿತಿ ನೀಡಿದ್ದು ಗಣತಿಗೆ ಶಿಕ್ಷಕರು ಮೊದಲ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಜೆ ದಿನಗಳಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲಿದೆ, ಹೀಗಾಗಿಯೇ ದಸರಾ ರಜೆಯಲ್ಲಿ ಅವರ ಸೇವೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಮೀಕ್ಷೆಗಳಿಗೆ ಸರ್ಕಾರಿ ಮತ್ತು ಅನುದಾನಿತ ಶಿಕ್ಷಕರನ್ನು ಬಳಸಿಕೊಳ್ಳುವುದು ಬಹು ಹಿಂದಿನಿಂದ ನಡೆದುಕೊಂಡ ಬಂದ ಪರಿಪಾಠ. ಈ ಹಿನ್ನೆಲೆಯಲ್ಲಿ 15 ದಿನಗಳ ದಸರಾ ರಜೆಯನ್ನು ಇನ್ನೂ 10 ದಿನಗಳವರೆಗೆ ಸಾಧ್ಯತೆಯೊಂದಿಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ದಸರಾ ಹೊತ್ತಿಗೆ ಹಿಂದುಳಿದ ಆಯೋಗ ಅಸ್ತಿತ್ವದಲ್ಲಿರುವ ಪ್ರಶ್ನಾವಳಿಯಲ್ಲಿ ಬದಲಾವಣೆ ಮಾಡುವುದೂ ಸೇರಿದಂತೆ ತನ್ನ ಪ್ರಾಥಮಿಕ ಕೆಲಸ ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸರ್ಕಾರಿ ಆದೇಶ ಹೊರಡಿಸಿದ ದಿನಾಂಕದಿಂದ ಮೂರು ತಿಂಗಳೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸರ್ಕಾರ ಉದ್ದೇಶಿಸಿದೆ, ಆದರೆ ಆ ಆದೇಶ ಇನ್ನೂ ಹೊರಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದರು.

2015 ರ ಕಾಂತರಾಜ್ ಆಯೋಗದ ಸಮೀಕ್ಷೆ ಬದಿಗಿಟ್ಟ ನಂತರ ರಾಜ್ಯ ಸರ್ಕಾರ ಹೊಸ ಸಮೀಕ್ಷೆಗೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯಪ್ರಕಾಶ್ ಹೆಗ್ಡೆ ಆಯೋಗ ಸಲ್ಲಿಸಿದ ಅದರ ವರದಿಯನ್ನು ಇತ್ತೀಚೆಗೆ ತಿರಸ್ಕರಿಸಿ ಹೊಸದಾಗಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದಾರೆ.


 

 


ದಸರಾ ರಜೆಗೆ ರಾಜ್ಯದಲ್ಲಿ ಜಾತಿಗಣತಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026