Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದು  ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ "ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ-2026" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.    

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ, ಕೊಟ್ಟಿಗೆ ಗೊಬ್ಬರದ ಸಾವಯವ ಪದ್ದತಿ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ತಕ್ಷಣಕ್ಕೆ  ರುಚಿ ಕೊಟ್ಟು, ಪೌಷ್ಟಿಕತೆ ಕಡಿಮೆ ಜತೆಗೆ ಆರೋಗ್ಯ ಕ್ಷೀಣಿಸಲು ನಾವೇ ದಾರಿ ಮಾಡಿಕೊಟ್ಟಂತೆ ಎಂದರು.

ಸರ್ಕಾರವು ರೈತರ ಉತ್ಪನ್ನಗಳಿಗೆ ಬೆಲೆ ನೀಡಿ, ಉತ್ತಮ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಬೇಕು. ನಮ್ಮ ರೈತರು ಗುಣಮಟ್ಟದ ಬೆಳೆಗಳು ಬೆಳೆಯುತ್ತಿದ್ದು, ವಿದೇಶಗಳಿಗೆ ಆಹಾರ ಪದಾರ್ಥಗಳು ಹಾಗೂ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಪ್ತು ಆಗುತ್ತಿದೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು  ಮಾತನಾಡಿ ಕೃಷಿ ಇಲಾಖೆಯಿಂದ ಜಿಲ್ಲೆಯ ರೈತರಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷ 'ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ'ದಂತಹ ಕೃಷಿ ಕಾರ್ಯಕ್ರಮಗಳು ಆಯೋಜಿಸಿ, ಇಲಾಖೆಯ ಯೋಜನೆಗಳು ಹಾಗೂ ಹೊಸ ಕೃಷಿ ಸಂಬಂಧಿ ಪರಿಕರಗಳ ಪರಿಚಯ ಮಾಡಿಕೊಡಲಾಗುತ್ತಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳದಲ್ಲಿ ಸಿರಿಧಾನ್ಯಗಳಿಂದ ಅಲಂಕರಿಸಲ್ಪಟ ರಂಗೋಲಿಯು ಎಲ್ಲರ ಗಮನ ಸೆಳೆಯಿತು.

*ಜಿಲ್ಲೆಯ ವಿವಿಧ ಭಾಗದ 45 ಜನ ಸ್ಪರ್ಧೆಯಲ್ಲಿ ಭಾಗಿ:*
ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ನಾನಾ ಭಾಗಗಳಿಂದ ಜನ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಸ್ಪರ್ಧೆ"ಯಲ್ಲಿ 45 ಜನ ಮಹಿಳೆಯರು ಭಾಗವಹಿಸಿ, ಪಾಕ ಸ್ಪರ್ಧೆಯಲ್ಲಿ ತಮ್ಮ ಕೈಚಳಕದಿಂದ ತಯಾರಿಸಿದ ರಾಗಿ ಉಪ್ಪಿಟ್ಟು, ಕರದಂಟು, ನವಣೆ ಪಲಾವ್, ಸಜ್ಜೆ ಲಾಡುಅಗಸೆ ಮಜ್ಜಿಗೆ, ಮೆಂತ್ಯೆ ಕಡುಬು ಮತ್ತು ಸಿರಿಧಾನ್ಯಗಳ ಪಾಯಸ ಸೇರಿದಂತೆ ವಿವಿಧ ಖಾದ್ಯಗಳನ್ನು ಪ್ರದರ್ಶಿಸಿದರು.

*ಗಮನ ಸೆಳೆದ ಹಳೆಯ ಹಾಗೂ ಆಧುನಿಕ ವಸ್ತು ಪ್ರದರ್ಶನ:*
ಕಿಸಾನ್ ಮೇಳದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಿಕರು ದಿನಬಳಕೆ ಮಾಡುತ್ತಿದ್ದ ಪಾರಂಪರೀಕ ವಸ್ತುಗಳು, ಲೋಹಗಳು, ಮಶೀನ್ ಗಳನ್ನು ಸೇರಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆಗಳು ಇಲಾಖಾ ಯೋಜನೆಗಳ ಕುರಿತು ಮಾಹಿತಿಯನ್ನೊಳಗೊಂಡ ವಸ್ತು ಪ್ರದರ್ಶನವನ್ನು ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ. ಜಗನ್ನಾಥ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್ ಆರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಂಕಜ ಹೆಚ್, ದೊಡ್ಡಬಳ್ಳಾಪುರ ಕೆಪಿಸಿಸಿ ಸದಸ್ಯ ಎಸ್. ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗವಿಸಿದ್ದಪ್ಪ, ನಾಲ್ಕು ತಾಲೂಕುಗಳ ಕೃಷಿಕ ಸಮಾಜದ ಅಧ್ಯಕ್ಷರು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ