LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ಇಂಜಿನಿಯರ್ಸ್ ಕಾರ್ಯನಿರ್ವಹಿಸುವ ಅವಧಿ ಬದಲಾವಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಎಲ್ಲಾ ಅಭಿಯಂತರರು/ಅಧಿಕಾರಿಗಳಿಗೆ ಕಾರ್ಯನಿರ್ವಹಿಸುವ ಅವಧಿ ಬದಲಾವಣೆ ಮಾಡಲಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ಹಲವಾರು ಬೀದಿ ದೀಪಗಳು ಹುರಿಯದೇ ಇರುವ ಬಗ್ಗೆ ದೂರುಗಳು ಬಂದಿರುತ್ತದೆ.

ಸದರಿ ದೂರುಗಳು ಹೆಚ್ಚಾಗಿ ರಾತ್ರಿ ಹೊತ್ತಿನಲ್ಲಿ ಅಂದರೆ ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೂ ಬರುತ್ತಿದ್ದು, ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು ನಿಗದಿಪಡಿಸಲಾದ ಸಮಯಕ್ಕೆ ಸರಿಪಡಿಸದಿರುವುದು ಕಂಡುಬಂದಿದ್ದು, ಸದರಿ ಕಾರ್ಯಕ್ಷಮತೆಯ ಕೊರತೆಯು ಬಿಬಿಎಂಪಿ ವಿದ್ಯುತ್ ವಿಭಾಗದ ಮೇಲು ಉಸ್ತುವಾರಿಯು ನಡೆಯದೇ ಇರುವುದು ಸಹ ಒಂದು ಕಾರಣವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನಿರ್ದೇಶನದಂತೆ ವಿದ್ಯುತ್ ಇಲಾಖೆಯ ಎಲ್ಲಾ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ/ಕಿರಿಯ ಅಭಿಯಂತರರು, ಗುತ್ತಿಗೆ ಅಭಿಯಂತರರು ದಿನಾಂಕ:07.05.2024ರಿಂದ ಪ್ರಾರಂಭಿಸಿದಂತೆ ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಸಂಜೆ 5.00 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಪ್ರದಾನ ಅಭಿಯಂತರರು ಆಂತರಿಕ ಕಛೇರಿ ಟಿಪ್ಪಣಿಯ ಮೂಲಕ ಮಾನ್ಯ ಮುಖ್ಯ ಆಯುಕ್ತರು ರವರ ನಿರ್ದೇಶನದಂತೆ ಆದೇಶಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು