Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಹಿಳೆಯರ ಬಗೆಗಿನ ಮನೋಭಾವನೆ ಬದಲಾಯಿಸಿಕೊಳ್ಳಿ- ಭಾರತಿ ಹೆಗಡೆ

ಮಹಿಳೆಯರ ಬಗೆಗಿನ ಮನೋಭಾವನೆ ಬದಲಾಯಿಸಿಕೊಳ್ಳಿ-
ಭಾರತಿ ಹೆಗಡೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಹಿಳೆಯರ ಮೇಲೆ ನಿರಂತರ ಶೋಷಣೆಗಳು ನಡೆಯುತ್ತಿವೆ. ಅವುಗಳನ್ನು ಖಂಡಿಸುವ ವ್ಯವಸ್ಥೆ ನಿರ್ಮಾಣವಾಗಬೇಕಿದೆ. ಮಹಿಳೆಯರ ಬಗೆಗಿನ ಮನೋಭಾವನೆ ಬದಲಾಯಿಸಿಕೊಳ್ಳಬೇಕು ಎಂದು ಪತ್ರಕರ್ತೆ ಭಾರತಿ ಹೆಗಡೆ ಹೇಳಿದರು.

ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವುಗಳ ಆಶ್ರಯದಲ್ಲಿ ಆಯೋಜಿಸಿರುವ ಯುವ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಶಿಬಿರದ ಪತ್ರಿಕೆಗಳು ಮತ್ತು ಮಹಿಳಾ ಸಾಹಿತ್ಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದರು.

ಇಂದು ಮಹಿಳಾ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಅವಶ್ಯವಿದೆ. ಅವಮಾನ, ಅಸ್ಮಿತೆಯನ್ನು ಹೋಗಲಾಡಿಸಬೇಕಾಗಿದೆ. ಆರೋಗ್ಯಯುತ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣ ಬಹಳ ಅವಶ್ಯಕ. ಮಹಿಳೆಯರ ಪರ ಸೂಕ್ಷ್ಮತೆ ಬರಬೇಕು. ಮಹಿಳೆಯರಿಗೆ ತನ್ನದೇಯಾದ ಘನತೆ ಬೇಕಾಗಿದೆ. ಮಹಿಳೆಯರ ಕುರಿತಾದ ಬರಹಗಳನ್ನು ಪುರುಷರು ಸಹ ಓದಬೇಕಾಗುತ್ತದೆ ಎಂದರು.

ಮಹಾಮಾರಿ ಕರೋನಾ ಅಪ್ಪಳಿಸಿದ ಬಳಿಕ ಸಾಕಷ್ಟು ಮಹಿಳಾ ಪುರವಣಿಗಳು ಪ್ರಕಟವಾಗುವುದನ್ನು ನಿಲ್ಲಿಸುವುದು. ಮಹಿಳಾ ಪುರವಣಿಗಳು ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ನಮ್ಮ ಧೋರಣೆಗಳನ್ನು ಬದಲಾಯಿಸಿಕೊಳ್ಳಬೇಕು. ಮಹಿಳೆಯರ ಸಮಸ್ಯೆಗಳು ಇಂದಿಗೂ ಸಾಕಷ್ಟಿವೆ. ಧಾರಾವಾಹಿ, ಕಥೆ, ಕವಿತೆ, ಕಾದಂಬರಿಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಪತ್ರಿಕೆಗಳಲ್ಲಿ ಸಹ ಮಹಿಳಾ ಬರಹಗಳಿಗೆ ಒತ್ತು ನೀಡಬೇಕಿದೆ. ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು. ಮಹಿಳೆಯರು ಸಾಮಾಜಿಕ ಮಾಧ್ಯಮ, ವಿವಿಧ ವೇದಿಕೆಗಳ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ದೊರೆತ ನಂತರ ಅವರಿಗೆ ಗೌರವ ದೊರೆಯುತ್ತಿದೆ. ಆದರೆ ಈ ಮೊದಲು ಅವರು ಯಾರೂ ಎಂಬುದು ಸಹ ಸಾಕಷ್ಟು ಜನರಿಗೆ ಗೊತ್ತಿರಲಿಲ್ಲ. ಮಹಿಳೆಯರಿಗೆ ಸ್ಥಾನಮಾನಗಳು ದೊರೆಯುವಂತೆ ಆಗಬೇಕು ಎಂದು ವಿವರಣೆ ನೀಡಿದರು.

ಶಿಬಿರಾರ್ಥಿಗಳ ಪ್ರಶ್ನೆಗಳಿಗೆ ವಿವರವಾಗಿ ಉತ್ತರಿಸಿದರು. ಈ ಸಂದರ್ಭದಲ್ಲಿ ಸುಮನಾ ಎಸ್ ಅಂಗಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್‌.ಎನ್.ಮುಕುಂದರಾಜ್, ಸದಸ್ಯ ಸಂಚಾಲಕಿ ಡಾ‌.ಪಿ.ಚಂದ್ರಿಕಾ, ಶಿಬಿರದ ಸಹ ನಿರ್ದೇಶಕಿ ಮಮತಾ ಅರಸೀಕೆರೆ ಸೇರಿದಂತೆ ಶಿಬಿರಾರ್ಥಿಗಳು ಇತರರು ಉಪಸ್ಥಿತರಿದ್ದರು.

ಮಹಿಳಾ ಪತ್ರಿಕೋದ್ಯಮದ ಬೆಳೆದು ಬಗೆ-ತಿರುಮಲಾಂಬ ಅವರು ಕರ್ನಾಟಕ ನಂದಿನಿ ಎಂಬ ಪತ್ರಿಕೆಯನ್ನು ಆರಂಭಿಸುವ ಮೂಲಕ ಮಹಿಳಾ ಪತ್ರಿಕೋದ್ಯಮಕ್ಕೆ ನಾಂದಿ ಹಾಡಿದರು. 1913 ರಲ್ಲಿ ಸತಿ ಹಿತೈಷಿ ಎಂಬ ಗ್ರಂಥ ಮಾಲೆಯನ್ನು ಹೊರ ತಂದರು.ಅದರಲ್ಲಿ 41 ಪುಸ್ತಕಗಳಿದ್ದು, ಸುಮಾರು 28 ಪುಸ್ತಕಗಳನ್ನು ಸ್ವತಃ ತಿರುಮಲಾಂಬ ಅವರು ಬರೆದಿದ್ದಾರೆ. ಆರ್.ಕಲ್ಯಾಣಮ್ಮ ಅವರು ಸರಸ್ವತಿ ಎಂಬ ಪತ್ರಿಕೆಯನ್ನು ಪ್ರಾರಂಭಿಸಿದರು. ನಂತರದಲ್ಲಿ ಚಿತ್ರಾ, ಸುಹಾಸಿನಿ, ಸೋದರಿ, ಜಯ ಕರ್ನಾಟಕ, ವೀರಮಾತೆ, ಗಿರಿಬಾಲೆ, ಸುಪ್ರಭಾತ ಎಂಬ ಮಹಿಳಾ ಪತ್ರಿಕೆಗಳು ಹುಟ್ಟಿಕೊಂಡವು. 80 ರ ದಶಕದಲ್ಲಿ ಅಚಲಾ ಹಾಗೂ ನವಮಾನಸ ಪತ್ರಿಕೆಗಳು ಆರಂಭವಾದವು ಎಂದು ವಿವರಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ