Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ

 

ಬೆಂಗಳೂರು :
ಹಿರಿಯ ರಾಜಕೀಯ ಮುತ್ಸದ್ದಿ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ