Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ. ಈ ಸಿದ್ಧಾಂತಕ್ಕೆ ಒಂದು ಪರಂಪರೆ ಇದೆ: ಕೆ.ವಿ.ಪ್ರಭಾಕರ

ಬೆಳಗಾವಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ‌ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.‌

ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ.

ಒಂದು ಬಲಿಷ್ಠವಾದ ವ್ಯವಸ್ಥೆ ಏಕಲವ್ಯರ ಬೆರಳುಗಳನ್ನು, ಅವಕಾಶ ಮತ್ತು ಪ್ರತಿಭೆಗಳನ್ನು ಹೇಗೆ ಕಿತ್ತುಕೊಳ್ಳುತ್ತದೆ ಎನ್ನುವುದನ್ನು ನಾನು ಪತ್ರಕರ್ತನಾಗಿ ಕಲಿತಿದ್ದೆ. ಆದರೆ, ಏಕಲವ್ಯರ ಬೆರಳುಗಳಿಗೆ ಶಕ್ತಿ ತುಂಬಿ ಬೆವರಿನ‌ ಸಂಸ್ಕೃತಿಗೆ ಘನತೆ ತರುವುದು ಹೇಗೆ ಎನ್ನುವುದನ್ನು ನಾನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಲಿತೆ. ನಾನು ಮಾನ್ಯ ಮುಖ್ಯಮಂತ್ರಿಗಳ ನೆರಳಿಗೆ ಬಂದು ಒಂದು ಡಜನ್ ವರ್ಷಗಳೇ ಕಳೆದವು. ಈ ಅವಧಿಯಲ್ಲಿ ನಾನು ಗ್ರಹಿಸಿದ್ದು ಏನೆಂದರೆ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಒಬ್ಬ ರಾಜಕೀಯ ನಾಯಕರಲ್ಲ. ಒಂದು ಸಿದ್ಧಾಂತ. ಈ ಸಿದ್ಧಾಂತಕ್ಕೆ ಒಂದು ಪರಂಪರೆ ಇದೆ. ಆ ಪರಂಪರೆ ಸೃಷ್ಟಿಸಿದ ಅವಕಾಶಗಳ ಕಾರಣಕ್ಕೇ ಇಂದು ಇಲ್ಲಿ ನಾನು ಸನ್ಮಾನಿತನಾಗುತ್ತಿದ್ದೇನೆ. ಆದ್ದರಿಂದ ಈ ಸನ್ಮಾನವನ್ನು ನಾನು ಸಿದ್ಧರಾಮಯ್ಯ ಅವರ ಪರಂಪರೆಗೆ ಅರ್ಪಿಸುತ್ತೇನೆ ಎಂದರು.

ವಿಧಾನಸೌಧದಲ್ಲಿ ಬೇರೆ ಬೇರೆ ಜನ ಸಮುದಾಯಗಳ, ದುಡಿಯುವ ವರ್ಗಗಳ ಸಭೆಗಳು ನಡೆಯುವಾಗ ಅವರೆಲ್ಲರ ಬಾಯಲ್ಲಿ ಬರುವ ಒಂದು ಮಾತು ಪದೇ ಪದೇ ನನ್ನ ಕಿವಿಗೆ ಬೀಳುತ್ತದೆ. " ಸಾರ್, ನಮಗೆ ನ್ಯಾಯ ಸಿಕ್ಕರೆ ನಿಮ್ಮ ಅವಧಿಯಲ್ಲೇ ಸಿಗಬೇಕು ಸರ್. ಹಿಂದಿನವರೂ ಮಾಡಿಲ್ಲ, ಮುಂದೆ ಬರುವವರೂ ಮಾಡುವುದೂ ಕಷ್ಟ ಸರ್". ಈ ಮಾತು ನನ್ನನ್ನು ಸದಾ ಎಚ್ಚರದಲ್ಲಿ ಇರುವಂತೆ ಮಾಡಿ ನನ್ನ ಕರ್ತವ್ಯ ಪ್ರಜ್ಞೆಯನ್ನು ರೂಪಿಸಿದೆ ಎಂದರು.

ಎರಡು ಬಾರಿ ಮುಖ್ಯಮಂತ್ರಿ ಆಗುವುದು, ಸತತ ಮೂರು ದಶಕಗಳ ಕಾಲ ಜನ ಸಮುದಾಯಗಳ ಭರವಸೆಯ ನಾಯಕರಾಗಿ ರೂಪುಗೊಂಡಿದ್ದು ಅವರ ಸಾಮಾಜಿಕ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಈ ಬದ್ಧತೆ ನೇರವಾಗಿ ನನ್ನ ಮೇಲೆ ಪ್ರಭಾವ ಬೀರಿದೆ ಎಂದು ವಿವರಿಸಿದರು.

ಪತ್ರಕರ್ತ ಸಮುದಾಯದ 20-25 ವರ್ಷಗಳ ಬೇಡಿಕೆಗೆ ನಾನು ಮುಕ್ತಿ ದೊರಕಿಸಿಕೊಟ್ಟೆ ಎಂದು ನೀವೆಲ್ಲಾ ಹೇಳುತ್ತಿದ್ದೀರಿ. ಇದೆಲ್ಲವೂ ಒಬ್ಬನಿಂದ ಆಗಿದ್ದಲ್ಲ, ಮುಖ್ಯಮಂತ್ರಿಗಳು ನನಗೆ ಕೊಟ್ಟ ಶಕ್ತಿ ಮತ್ತು ಪತ್ರಕರ್ತರ ಸಂಘದ ಸತತ ಹೋರಾಟ, ನಿರಂತರ ಪ್ರಯತ್ನ ಕೂಡ ಕಾರಣ ಎಂದು ಹೇಳಲು ಬಯಸುತ್ತೇನೆ.

ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ದಿಲೀಪ್ ಕುರಂದವಾಡೆ ಇಬ್ಬರೂ ಅಸಾಧ್ಯ ಸಂಘಟಕರು ಮತ್ತು ಅಷ್ಟೇ ಬದ್ಧತೆಯುಳ್ಳವರು. ನಿಮ್ಮಲ್ಲರ ಹಾರೈಕೆ ಮತ್ತು ಬೆಂಬಲದಲ್ಲಿ ನಾನು ಇಲ್ಲಿಯವರೆಗೂ ಹೆಜ್ಜೆ ಇಟ್ಟಿದ್ದೇನೆ. ನಡೆಯಬೇಕಾಗಿರುವ ಹಾದಿ ಬಹಳ ಇದೆ. ಆದರೆ, ನನಗೆ ಒದಗಿ ಬಂದಿರುವ ಈ ಅವಕಾಶದಲ್ಲಿ ನಾನು ಪತ್ರಕರ್ತರ ಬಹುತೇಕ ಸಮಸ್ಯೆಗಳಿಗೆ ಮುಕ್ತಿ ಹಾಡಬೇಕು ಎನ್ನುವ ಖಚಿತ ನಿರ್ಧಾರ ಮಾಡಿಯೇ ಕೆಲಸ ಮಾಡುತ್ತಿದ್ದೇನೆ.

ಹತ್ತಾರು ವರ್ಷಗಳಿಂದ ಜಡ್ಡುಗಟ್ಟಿರುವ ತಾಂತ್ರಿಕ‌ ಅಡೆ ತಡೆಗಳನ್ನು, ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಇಲಾಖೆಯ ಕಾರ್ಯದರ್ಶಿ ಕಾವೇರಿ, ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರೂ ಸಹಕಾರ ನೀಡುತ್ತಿದ್ದಾರೆ. ಜೊತೆಗೆ ನಿಮ್ಮೆಲ್ಲರ ಒತ್ತಾಯ ಮತ್ತು ಆಗ್ರಹಗಳಿಗೂ ನಾನು ಕಿವಿಯಾಗಿದ್ದೇನೆ. ಎಲ್ಲರ ಒಟ್ಟು ಶ್ರಮದಲ್ಲಿ ಇನ್ನಷ್ಟು ಅನುಕೂಲಗಳು ಪತ್ರಕರ್ತ ಸಮುದಾಯಕ್ಕೆ ಸಿಗಲಿದೆ ಎಂದು ಹೇಳುತ್ತಾ, ಇವತ್ತಿನ‌ ಈ ಸನ್ಮಾನ ಮತ್ತು ದೀಪಕ್ ಕುರಂದವಾಡೆ ತಂಡದ ಪ್ರೀತಿ, ಅಭಿಮಾನಕ್ಕೆ ಆಭಾರಿ‌ ಆಗಿದ್ದೇನೆ ಎಂದರು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ದೀಪಕ್ ಕುರಂದವಾಡೆ, ಕೆಯುಡಬ್ಲುಜೆ ಬೆಳಗಾವಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ.ಭೀಮಶಿ ಎಲ್. ಜಾರಕಿಹೊಳಿ, ಸಂಘದ ಮುಖಂಡ ಮದನ್ ಗೌಡ ಸೇರಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ