LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೆಣಸಿನಕಾಯಿ ಬೆಳೆಗಾರರು, ನರ್ಸರಿ ಮಾಲೀಕರು ಸೂಕ್ತ ಕ್ರಮ ಅನುಸರಿಸಿ: ರತ್ನಪ್ರಿಯ ಯರಗಲ್ಲ


ಬಳ್ಳಾರಿ,ಜೂ.24



ಕುರುಗೋಡು ತಾಲ್ಲೂಕಿನ ಮೆಣಸಿನಕಾಯಿ ಬೆಳೆಗಾರರು ಮತ್ತು ನರ್ಸರಿ ಮಾಲೀಕರು ಉತ್ತಮ ಬೆಳೆಗಳನ್ನು ಪಡೆಯಲು ಸೂಕ್ತ ಕ್ರಮ ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ಉಪನಿರ್ದೇಶಕರಾದ ರತ್ನಪ್ರಿಯ ಯರಗಲ್ಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ನರ್ಸರಿ ಮಾಲೀಕರು ತಮ್ಮ ನರ್ಸರಿ ಚಟುವಟಿಕೆಗಳನ್ನು ನಿಯಮ ಬದ್ಧಗೊಳಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಸಸಿಗೆ ಕಡ್ಡಾಯವಾಗಿ ರೂ.40 ಪೈಸೆ ದರದಲ್ಲಿ ಮಾರಾಟ ಮಾಡಬೇಕು ಎಂದು ಹೇಳಿದ್ದಾರೆ.

ರೈತರಿಗೆ ಉತ್ತಮ ಗುಣಮಟ್ಟ ಸಸಿಗಳನ್ನು ನೀಡಲು ಅಳವಡಿಸಿಕೊಳ್ಳಬೇಕಾದ ವೈಜ್ಞಾನಿಕ ನರ್ಸರಿ ಕ್ರಮಗಳಾದ ಕೋಕೋಪಿಟ್ ಬಳಕೆ, ತರಕಾರಿ ನರ್ಸರಿಗಳಲ್ಲಿ ಕೀಟ ನಿರೋಧಕ ಭಲೆಗಳ ಬಳಕೆಯ ಬಗ್ಗೆ ಹಾಗೂ ಬಿಜೋಪಚಾರ ಕಟ್ಟುನಿಟ್ಟಾಗಿ ಮಾಡಬೇಕು ಎಂದು ತಿಳಿಸಿದ್ದಾರೆ.

ಮೆಣಸಿನಕಾಯಿ ಬೆಳೆಗಾರರು ಕಡ್ಡಾಯವಾಗಿ ನರ್ಸರಿ ಮೆಣಸಿನಕಾಯಿ ಸಸಿಗಳನ್ನು ಜಿಎಸ್ಟಿ ನೋಂದಣಿ ಹೊಂದಿರುವ ನರ್ಸರಿಗಳಿಂದಲೇ ಖರೀದಿಸಬೇಕು. ಬಿಲ್ನ್ನು ಪಹಣಿಯಲ್ಲಿರುವ ರೈತನ ಹೆಸರಿಗೆ ನೀಡಬೇಕು. ರೈತರು ಪಡೆದಂತಹ ಬಿಲ್ನ್ನು ಬೆಳೆ ಮಾರಾಟ ಆಗುವವರೆಗೂ ಭದ್ರವಾಗಿಟ್ಟುಕೊಳ್ಳಬೇಕು.

ನರ್ಸರಿ ಮಾಲೀಕರು ತಾವು ಉಪಯೋಗಿಸುವ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ವಿವರ ಕಡ್ಡಾಯವಾಗಿ ವಹಿಯಲ್ಲಿ ನಮೂದಿಸಬೇಕು. ರೈತರಿಂದ ಬೀಜ ಪಡೆದಿರುವ ಮತ್ತು ಸಸಿ ವಿತರಿಸಿದ ದಿನಾಂಕಗಳ ವಹಿ ತಪ್ಪದೇ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು