LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!

ಬೆಂಗಳೂರು: ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್ ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ ಟಿ ರವಿ ಅವರು ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ ಅವರು, ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾಗಿರುವ ಶಾಸಕ ಮುನಿರತ್ನ ಅವರ‌ ಮೇಲೆ ನಡೆದ ಹಲ್ಲೆ ದುರದೃಷ್ಟಕರ. ಯಾರೇ ತಪ್ಪು ಮಾಡಿದರೂ‌ ಕಾನೂನಿನ ಮೂಲಕ‌ ಅದನ್ನು ಎದುರಿಸಬೇಕು. ಬದಲಾಗಿ ಅವರ‌ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಗಾಂಧಿಗಿರಿ ನೆನಪಿಸಿಕೊಳ್ಳುವ ಸಮಯದಲ್ಲಿ ಗೂಂಡಾಗಿರಿ ಮಾಡುತ್ತಿದ್ದಾರೆ. ರಾಜ್ಯವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆಂದು ಕಿಡಿಕಾರಿದರು.

ಅಧಿಕಾರ ದುರುಪಯೋಗ ಆಗಿರೋದು‌ ಅಂಗೈ ನಲ್ಲಿ ಇರೋ ಹುಣ್ಣಿನಂತೆ. ನನ್ನನ್ನ‌ ಬಂಧಿಸಿದ್ದು ಯಾವ ಹಿನ್ನೆಲೆಯಲ್ಲಿ? ಅದರ ಪರಮಾಧಿಕಾರ ಇರೋದು ನಮ್ಮ ಸಭಾಪತಿ ಅವರಿಗೆ. ಸಭಾಪತಿಗಳು ರೂಲಿಂಗ್ ಕೊಟ್ಟ ಬಳಿಕವೂ ಕಾನೂನು ಉಲ್ಲಂಘನೆ ಆಗಿದೆ. ನನ್ನನ್ನು ಬಂಧನ ಮಾಡಿ ಅಮಾನವೀಯ ವರ್ತನೆ ಮಾಡಿದ್ದಾರೆ. ಆದರೆ. ಬೆನ್ನು ತೋರಿಸಿ ಓಡೋಗುವ ಅಭ್ಯಾಸ ನನಗಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ತುರ್ತು ಪರಿಸ್ಥಿತಿಯನ್ನು ದೇಶದ ಮೇಲೆ ಹೇರಿದ್ದ ಇಂದಿರಾ ಗಾಂಧಿ ಅವರ ಪರಿಸ್ಥಿತಿ ಏನಾಯ್ತು ಎಂದು ಪ್ರಶ್ನಿಸಿದರು.

ಶಾಸಕ ಮುನಿರತ್ನ ಮಾತನಾಡಿ, ಘಟನೆ ನಡೆದಾಗ ಸಿ ಟಿ ರವಿ ದೂರವಾಣಿ ಕರೆ ಮಾಡಿ ವಿಚಾರಿಸಿದರು. ನಿಮ್ಮ ಜೊತೆ ನಾವಿದ್ದೇವೆ, ಎಲ್ಲಾ ವಿಷಯವನ್ನ ದೆಹಲಿಗೆ ತಲುಪಿಸಿದ್ದೇನೆ ಎಂದಿದ್ದರು. ಒಬ್ಬ ಶಾಸಕನ ಹಕ್ಕನ್ನ ಕಸಿಯಲಾಗುತ್ತಿದೆ. ಕ್ಷೇತ್ರಕ್ಕೆ ಹೋಗಬಾರದು ಎಂದು ಹೀಗೆ ಮಾಡುತ್ತಿದ್ದಾರೆ. ಡಿ ಕೆ ಶಿವಕುಮಾರ್ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ಅವರಿಗೆ ಕ್ಷೇತ್ರಕ್ಕೆ ಹೋಗಲು ಅವಕಾಶ ಇದೆ, ಆದರೆ ನಾನು ಕ್ಷೇತ್ರಕ್ಕೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಆರೋಪ ಮಾಡಿದರು.

ಶಾಸಕಾರಗಲೇಬೇಕು ಎಂದುಕೊಂಡಿರುವ ಕಸುಮಾಗೆ ಒಂದು ಮಾತು ಹೇಳುತ್ತೇನೆ. ವಿದ್ಯಾವಂತರಿದ್ದೀರೆಂದು ಹೇಳ್ಕೊಂಡಿದ್ದೀರಿ, ಆದರೆ ಇಂತದಕ್ಕೆಲ್ಲ ಪ್ರಚೋದನೆ ಕೊಡಬೇಡಿ. ನಮ್ಮ ಕ್ಷೇತ್ರಕ್ಕೆ ಒಳ್ಳೆಯದಾಗಲು ನೋಡಿಕೊಳ್ಳಿ. ನಿಮ್ಮ ಮಾತನ್ನ ಎಲ್ಲರೂ ಕೇಳುತ್ತಾರೆ, ವರ್ಗಾವಣೆ ಲೆಟರ್ ಕೂಡ ನೀವು ಕೋಡುತ್ತೀರಿ. ಡಿಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ನಿಮ್ಮ ಮಾತು ಕೇಳುತ್ತಾರೆ. ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ, ಅದನ್ನ ಬಿಟ್ಟು ಮುನಿರತ್ನ ಮೇಲೆ ದಾಳಿ ಮಾಡಲು, ಚಪ್ಪಲಿ ಹಾರ ಹಾಕೋದಕ್ಕೆ, ಪೋಸ್ಟ್‌ರ್ ಹರಿಯೋದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದರು.

ಕಾಲ ಭೈರವೇಶ್ವರನ ಸನ್ನಿಧಿಗೆ ಬನ್ನಿ ಪ್ರಮಾಣ ಮಾಡೋಣ. ನ್ಯಾಯಾಲಯದ ತೀರ್ಪನ್ನು ನಾನು ಗೌರವಿಸುತ್ತೇನೆ. ತಿದ್ದಿಕೊಳ್ಳುತ್ತೀರ ಎಂದು ಭಾವಿಸುತ್ತೇನೆ. ಕ್ಷೇತ್ರದ ಜನ ಅಪ್ಪ ಮಗಳು ತೊಂದರೆ ಕೊಡುತ್ತಿದ್ದಾರೆ ಎಂದು ಮಾತಾಡುತ್ತಿದ್ದಾರೆ. ಇದು ನಿಮಗೂ ಶೋಭೆ ತರೋದಿಲ್ಲ. 10 ವರ್ಷ ಮುಂದಿದ್ದ ಕ್ಷೇತ್ರ 10 ವರ್ಷ ಹಿಂದಕ್ಕೆ ಹೋಗುತ್ತಿದೆ. ಅಭಿವೃದ್ಧಿ ಕೆಲಸಗಳೆಲ್ಲ ನಿಂತಿದೆ. ಯಾರಿಂದ ಎನ್ನೋದು ಗೊತ್ತಿದೆ. ರೇಪ್ ಕೇಸ್ ಹಾಕಿರೋದು ಅವರಿಗೆ ಗೊತ್ತಿಲ್ಲ ಎಂದು ಹೇಳಲಿ ಕಾಲ ಬೈರೇಶ್ವರನಲ್ಲಿ ಪ್ರಮಾಣ ಮಾಡಲಿ. ರೇಪ್ ಕೇಸ್ ಕೊಟ್ಟ ಹೆಣ್ಣು ಮಗಳು ಅವರಿಗೆ ಗೊತ್ತಿಲ್ಲ ಎಂದು‌ ಹೇಳಲಿ ನೋಡೋಣ. ನನಗೂ ಹೆಣ್ಣು ಮಕ್ಕಳಿದ್ದಾರೆ, 15 ವರ್ಷದ ಮೊಮ್ಮೊಗಳಿದ್ದಾಳೆ. ಈ ರೀತಿಯ ಸುಳ್ಳು ರೇಪ್ ಕೇಸ್ ಕೊಟ್ಟರೆ ಹೇಗೆ? ಈ ವಿಚಾರವನ್ನ ಕೇಂದ್ರದ ವರಿಷ್ಠರ ಗಮನಕ್ಕೆ ತಂದಿದ್ದೇನೆ ನಾನು ಪಕ್ಷದ ಜೊತೆ ಇದ್ದೇನೆ, ಪಕ್ಷ ನನ್ನ ಜೊತೆ ಇದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು