LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಯ ಒತ್ತುವರಿಯನ್ನು ತೆರವು

ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಹೀಗಾಗಿ  ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಯ ಒತ್ತುವರಿಯನ್ನು ತೆರವು ಕಾರ್ಯಾಚರಣೆ ಮಾಡಲಾಯಿತು.

ಮುಂದುವರಿದು, ಇತ್ತೀಚೆಗೆ ಮಹದೇವಪುರ ವಲಯದ ದೊಡ್ಡನೆಕ್ಕುಂದಿ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 2 ಎಕರೆ 6 ಗುಂಟೆ ಖುಲ್ಲಾ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ.

ಅದರಂತೆ ವಲಯ ಆಯುಕ್ತರ ಹಾಗೂ ಕಂದಾಯ ಇಲಾಖೆಯ ಸಹಕಾರದೊಂದಿಗೆ ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು ಪೊಲೀಸ್ ಸಹಯೋಗದೊಂದಿಗೆ 2 ಎಕರೆ 6 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿ ಅಳವಡಿಸುವ ಕಾರ್ಯ ಪ್ರಾರಂಭಿಸಿರುತ್ತಾರೆ.

ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 75 ಕೋಟಿ ರೂ. ಗಳಾಗಿರುತ್ತದೆಂದು ತಿಳಿದುಬಂದಿರುತ್ತದೆ. ಸದರಿ ಕೆರೆಯು ಒತ್ತುವರಿ ಮುಕ್ತವಾಗಿರುತ್ತದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ