LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಯನಗರ ಬಿಡಿಎ  ಸುತ್ತ ಮುತ್ತ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯ

ಬೆಂಗಳೂರು: ನಗರದ ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ಜಯನಗರ ವಿಭಾಗದ ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಯಿತು.

ಉಚ್ಛ ನ್ಯಾಯಾಲಯ ಹೊರಡಿಸಿರುವ ಆದೇಶದನುಸಾರ ಮತ್ತು ಪಾಲಿಕೆ ಮುಖ್ಯ ಆಯುಕ್ತರು ಬಿಬಿಎಂಪಿ ರವರ ಆದೇಶದಂತೆ ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಗಿದ್ದು, ಪಾದಚಾರಿ ಮಾರ್ಗದಲ್ಲಿ ಇಟ್ಟಿರುವ ಅನಧಿಕೃತ ಪೆಟ್ಟಿಗೆ ಅಂಗಡಿ, ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವುಮಾಡಲಾಯಿತು.

ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದ 32 ಅಂಗಡಿ ಮಳಿಗೆಯನ್ನು, ತಳ್ಳುವ ಗಾಡಿ, ಹಣ್ಣಿನ ವ್ಯಾರಿಗಳ ಕಟ್ಟಡ, ಶೆಡ್ ಗಳನ್ನು ಜೆಸಿಬಿ ಮೂಲಕ ತೆರವು ಮಾಡಲಾಯಿತು. ಪಳೆಯುವಳಿಕೆಯನ್ನು ಬೈರಸಂದ್ರದ ಮೈದಾನದಲ್ಲಿ ಸಂಗ್ರಹಿಸಿದ್ದು, ಒಟ್ಟಿಗೆ ಎಲ್ಲವನ್ನೂ ಬೇರೆಡೆಗೆ ಕೊಂಡೊಯ್ಯಲಾಗುತ್ತದೆ ಎಂದು  ತಿಳಿಸಿದರು.

ಅಂಗಡಿ ಮುಂಗಟ್ಟುಗಳನ್ನು ತೆರವುಗೊಲಿಸುವ ವೇಳೆ ಕೆಲವರು ನಮಗೆ ಬಿಬಿಎಂಪಿಯಿಂದಲೆ ಪರವಾನಿಗೆ ನೀಡಲಾಗಿದೆ, ಕಾಗದ ಪತ್ರಗಳು ಇವೆ, ನಮಗೆ ಮುಂದೆ ಏನು ಮಾಡಬೇಕು ಎಂದು ತಿಳಿಯುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡರು.

ಕಾರ್ಯಾಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ತಿಳಿಸಲಾಗಿದ್ದರೂ ಕೂಡ ಮೇಲ್ಕಾಣಿಸಿದ ರಸ್ತೆಗಳಲ್ಲಿ ಸುಮಾರು 1.00 ಕೀ. ಮೀಟರ್ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿಗಳು, ಮಾರುಕಟ್ಟೆ ವಿಭಾಗದ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು/ ಸಂಚಾರಿ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮಾರ್ಷಲ್‌ಗಳು, ಗ್ಯಾಂಗ್‌ಮನ್‌ಗಳು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್